ದೇಶ

ಅಕ್ರಮ ಹಣ ವರ್ಗಾವಣೆ: ವಾದ್ರ ಸಂಬಂಧಿಸಿದ ಕಂಪನಿ ವಿರುದ್ಧ ಎಫ್ಐಆರ್

Srinivas Rao BV

ನವದೆಹಲಿ: ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಗೆ ಸಂಬಂಧಿಸಿದ ಸಂಸ್ಥೆಯ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.
ಭೂ ಕಬಳಿಕೆ ಪ್ರಕರಣದಿಂದ ರಾಜಸ್ಥಾನದ ಮೂಲದ ಸಂಸ್ಥೆಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದ್ದು, ಸಂಸ್ಥೆಗೂ ರಾಬರ್ಟ್ ವಾದ್ರಗೂ ಸಂಬಂಧವಿರುವುದು ತಿಳಿದುಬಂದಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ಭೂ ಕಬಳಿಕೆ ಮಾಡಿರುವ ಸಂಸ್ಥೆಯೊಂದಿಗೆ ರಾಬರ್ಟ್ ವಾದ್ರಗೂ ಸಂಬಂಧವಿರುವುದರ ಬಗ್ಗೆ ಮಾಧ್ಯಮಗಳ ವರದಿಯನ್ನೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಎಫ್ಐಆರ್ ನಲ್ಲಿ ನೇರವಾಗಿ ವಾದ್ರ ಅವರ ಹೆಸರನ್ನು ಸೇರಿಸಲಾಗಿಲ್ಲ. ಆದರೆ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಕಾಂಗ್ರೆಸ್ ನ ವಕ್ತಾರ ಶಕೀಲ್ ಅಹ್ಮದ್ ಹೇಳಿಕೆ ನೀಡಿದ್ದು ರಾಜಸ್ಥಾನ ಸರ್ಕಾರ ರಾಜಕೀಯ ಹಗೆತನ ಸಾಧಿಸುತ್ತಿದೆ ಎಂದು ಹೇಳಿದ್ದಾರೆ.

SCROLL FOR NEXT