ಸಬ್ ಇನ್‌ಸ್ಪೆಕ್ಟರ್ ಅನೈತಿಕ ವರ್ತನೆ 
ದೇಶ

ಹಫ್ತಾ ಕೊಡದಕ್ಕೆ ಸ್ವಾವಲಂಬಿ ಹಿರಿಯ ನಾಗರಿಕರನ ಮೇಲೆ ಪೊಲೀಸ್ ದರ್ಪ

ಒಪ್ಪತ್ತು ಊಟಕ್ಕಾಗಿ ರಸ್ತೆಬದಿಯಲ್ಲಿ ಟೈಪ್ ರೈಟರ್ ಇಟ್ಟುಕೊಂಡು ಸ್ವಾವಲಂಬನೆ ಜೀವನ ನಡೆಸುತ್ತಿದ್ದ ಹಿರಿಯ ನಾಗರಿಕರೊಬ್ಬರ ಮೇಲೆ ಉತ್ತರ ಪ್ರದೇಶದ...

ಲಖನೌ: ಒಪ್ಪತ್ತು ಊಟಕ್ಕಾಗಿ ರಸ್ತೆಬದಿಯಲ್ಲಿ ಟೈಪ್ ರೈಟರ್ ಇಟ್ಟುಕೊಂಡು ಸ್ವಾವಲಂಬನೆ ಜೀವನ ನಡೆಸುತ್ತಿದ್ದ ಹಿರಿಯ ನಾಗರಿಕರೊಬ್ಬರ ಮೇಲೆ ಉತ್ತರ ಪ್ರದೇಶದ ಪೊಲೀಸರು ತಮ್ಮ ಪ್ರತಾಪ್ ತೋರಿಸಿದ್ದು, ಟೈಪ್ ರೈಟರನ್ನು ಹೊಡೆದು ಹಾಕಿದ್ದಾರೆ. 
ದುಡಿಮೆಗಿದ್ದ ಏಕೈಕ ಮಾರ್ಗವನ್ನು ಕಳೆದುಕೊಂಡಿದ್ದ ಹಿರಿಯ ಜೀವ ತಲ್ಲಣಿಸಿ ಹೋಗಿದ್ದರು. ದಾಳಿ ಸಂದರ್ಭದಲ್ಲಿ ಸ್ಥಳದಲ್ಲಿದ್ದವರೊಬ್ಬರು ಮೊಬೈಲ್​ಫೋನ್​ನಲ್ಲಿ ಪೊಲೀಸ್ ಪ್ರತಾಪವನ್ನು ವಿಡಿಯೋ ಚಿತ್ರೀಕರಿಸಿಕೊಂಡು, ಸಾಮಾಜಿಕ ಜಾಲತಾಣಕ್ಕೆ ಅಳವಡಿಸಿದ್ದರು. ಈ ವಿಡಿಯೋವನ್ನು ನೋಡಿದ ಜನರು ಉತ್ತರ ಪ್ರದೇಶದ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. 
65 ವರ್ಷದ ಕೃಷ್ಣಕುಮಾರ್ ಹಲವಾರು ವರ್ಷಗಳಿಂದ ಹಳೆಯದಾದ ಟೈಪ್​ರೈಟರ್ ಹಿಡಿದುಕೊಂಡು ಲಕನೌನ ಪ್ರಧಾನ ಅಂಚೆ ಕಚೇರಿ ಬಳಿಯ ಪಾದಚಾರಿ ಮಾರ್ಗದಲ್ಲಿ ಕುಳಿತು ತಮ್ಮ ಬಳಿ ಬರುತ್ತಿದ್ದ ಗ್ರಾಹಕರ ಕಾಗದಪತ್ರಗಳನ್ನು ಟೈಪ್ ಮಾಡಿಕೊಡುತ್ತಿದ್ದರು. ಸಿಗುತ್ತಿದ್ದ ಪುಡಿಗಾಸಿನಲ್ಲೇ ಅವರು ಕಳೆದ 35 ವರ್ಷಗಳಿಂದ ಸ್ವಾಲಂಬನೆಯ ಜೀವನ ನಡೆಸುತ್ತಿದ್ದರು. ಹಫ್ತಾ ಕೊಡುವಂತೆ ಪೊಲೀಸ್ ಸಬ್​ಇನ್ಸ್​ಸ್ಪೆಕ್ಟರ್ ಪ್ರದೀಪ್ ಕುಮಾರ್ ಒತ್ತಾಯಿಸುತ್ತಿದ್ದರು. ಇದಕ್ಕೆ ಕೃಷ್ಣಕುಮಾರ್ ನಿರಾಕರಿಸಿದ್ದರು. 
ಈ ಹಿನ್ನೆಲೆಯಲ್ಲಿ ಪಾದಚಾರಿ ಮಾರ್ಗದಲ್ಲಿ ಓಡಾಡುವವರಿಗೆ ತೊಂದರೆಯಾಗುತ್ತದೆ ಎಂಬ ನೆಪದಲ್ಲಿ ಬಂದ ಪ್ರದೀಪ್ ಕುಮಾರ್ ಏಕಾಏಕಿ ಕೃಷ್ಣಕುಮಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲು ಆರಂಭಿಸಿದರು. ಜತೆಗೆ ಅವರ ಬಳಿಯಿದ್ದ ಟೈಪ್​ರೈಟರ್ ಅನ್ನು ಎತ್ತಿ ನೆಲಕ್ಕೆ ಕುಕ್ಕಿ ಪುಡಿಪುಡಿ ಮಾಡಿದ್ದರು.
ಎಸ್ಐ ಪ್ರದೀಪ್ ಕುಮಾರ್ ಅಮಾನತು
ಎಸ್​ಐ ಪ್ರದೀಪ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಜತೆಗೆ ಹೊಸದಾದ 2 ಟೈಪ್​ರೈಟರ್​ಗಳನ್ನು ಖರೀದಿಸಿ ಜಿಲ್ಲಾಧಿಕಾರಿ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅವರ ಮೂಲಕ ಕೃಷ್ಣಕುಮಾರ್ ಅವರ ಮನೆಬಾಗಿಲಿಗೆ ಅವುಗಳನ್ನು ತಲುಪಿಸಿ, ಮಾನವೀಯತೆ ಮೆರೆದರು. ಅಲ್ಲದೆ, ಜಿಲ್ಲಾಧಿಕಾರಿ ಕಚೇರಿ ಅಥವಾ ಇನ್ನಾವುದೇ ಸರ್ಕಾರಿ ಕಚೇರಿಯ ಸುತ್ತಮುತ್ತ ಸೂಕ್ತ ಸ್ಥಳವನ್ನು ಹುಡುಕಿ ಟೈಪ್​ರೈಟರ್ ಅಂಗಡಿ ಇಟ್ಟುಕೊಳ್ಳಲು ಕೃಷ್ಣಕುಮಾರ್ ಅವರಿಗೆ ನೆರವಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT