ಪ್ರಮೋದ್ ಮುತಾಲಿಕ್ 
ದೇಶ

ಶ್ರೀರಾಮ ಸೇನೆಯಿಂದ 15 ಮಂದಿಗೆ ನೋಟಿಸ್

ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ. 14ರಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಶ್ರೀರಾಮ ಸೇನೆಯ...

ಧಾರವಾಡ: ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ. 14ರಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಶ್ರೀರಾಮ ಸೇನೆಯ ಹೆಸರು ದಾಖಲಿಸಿದ ಕಾರಣಕ್ಕಾಗಿ 15 ಜನರಿಗೆ ಲೀಗಲ್ ನೋಟಿಸ್ ನೀಡಲಾಗಿದೆ.

ಅಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದ ಮನವಿಯಲ್ಲಿ ಶ್ರೀರಾಮ ಸೇನೆ ಹೆಸರು ದಾಖಲಿಸಲಾಗಿತ್ತು. ಆ ಮನವಿಯಲ್ಲಿ ಸಹಿ ಮಾಡಿದ 138 ಜನರಿಗೂ ನೋಟಿಸ್ ನೀಡಲು ತೀರ್ಮಾನಿಸಲಾಗಿತ್ತು. ಆದರೆ, ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ ಅವರು ತಮ್ಮನ್ನು ಸಂಪರ್ಕಿಸಿ ಮನವಿಯಲ್ಲಿ ಸಂಘಟನೆಯ ಹೆಸರು ಸೇರಿದ್ದು ತಮಗೆ ಗೊತ್ತಿಲ್ಲ.

ಸಂಯೋಜಕರು ತರಾತುರಿಯಲ್ಲಿ ಸಹಿ ಮಾಡಿಸಿಕೊಂಡರು. ಸಂಘಟನೆ ಹೆಸರು ಮನವಿಯಲ್ಲಿ ದಾಖಲಾಗಿದ್ದರೆ ಅದಕ್ಕೂ ತಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಡಾ.ಚೆನ್ನವೀರ ಕಣವಿ ಮತ್ತು ಡಾ. ಗಿರಡ್ಡಿ ಗೋವಿಂದರಾಜ ಅವರನ್ನು ಹೊರತು ಪಡಿಸಿ ಮೊದಲ ಹಂತದಲ್ಲಿ 15 ಜನರಿಗೆ ನೋಟಿಸ್ ರವಾನಿಸಲಾಗುತ್ತಿದೆ ಎಂದು ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಪತ್ರಿಕೆಗೆ ಸ್ಪಷ್ಟಪಡಿಸಿದ್ದಾರೆ.

ಮನಲಿಯಲ್ಲಿ ಸಹಿ ಮಾಡಿದ ಬಹಳಷ್ಟು ಜನರ ವಿಳಾಸ ದೊರೆತಿಲ್ಲ. ವಿಳಾಸ ಸಿಕ್ಕ ಕೂಡಲೇ ಅವರಿಗೂ ನೋಟಿಸ್ ಕಳುಹಿಸಲಾಗುವುದು. ಮೊದಲ ಹಂತದಲ್ಲಿ ಗದಗ ತೋಂಟದಾರ್ಯ ಮಠದ ಶ್ರೀಗಳು, ಸಾಹಿತಿಗಳಾದ ರಹಮತ್ ತರೀಕೆರೆ, ಶ್ಯಾಮಸುಂದರ ಬಿದರಕುಂದಿ, ಆರ್.ಕೆ. ಹುಡುಗಿ, ಕೆ. ನೀಲಾ, ಮೀನಾಕ್ಷಿ ಬಾಳಿ, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸೇರಿದಂತೆ 15 ಜನರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ