ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ನಜ್ಮಾ ಹೆಫ್ತುಲ್ಲಾ 
ದೇಶ

ವಕ್ಫ್ ಆದಾಯ ಅಲ್ಪಸಂಖ್ಯಾತರ ಎಲ್ಲ ತೊಂದರೆಗಳನ್ನು ಪರಿಹರಿಸಬಹುದು: ಹೆಫ್ತುಲ್ಲಾ

ದೇಶದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರು ಎದುರಿಸುತ್ತಿರುವ ಎಲ್ಲ ತೊಂದರೆಗಳನ್ನು ವಕ್ಫ್ ಆಸ್ತಿಯಿಂದ ಬರುವ ಆದಾಯದಿಂದ ಪರಿಹರಿಸಬಹುದು

ಹೈದರಾಬಾದ್: ದೇಶದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರು ಎದುರಿಸುತ್ತಿರುವ ಎಲ್ಲ ತೊಂದರೆಗಳನ್ನು ವಕ್ಫ್ ಆಸ್ತಿಯಿಂದ ಬರುವ ಆದಾಯದಿಂದ ಪರಿಹರಿಸಬಹುದು ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ನಜ್ಮಾ ಹೆಫ್ತುಲ್ಲಾ ಸೋಮವಾರ ಹೇಳಿದ್ದಾರೆ.

೨೦೦೬ ರಲ್ಲಿ ಸಂಚಾರ್ ಮಂಡಲಿ ಅಂದಾಜಿಸಿದ ಸುಮಾರು ೧೨,೦೦೦ ಕೋಟಿ ವಾರ್ಷಿಕ ಆದಾಯದಿಂದ ಸರ್ಕಾರಕ್ಕೆ ಯಾವುದೇ ಹೊರೆಯಾಗದಂತೆ ಎಲ್ಲ ಯೋಜನೆಗಳನ್ನು ಅನುಷ್ಠಾನ ಮಾಡಬಹುದು ಎಂದು ಅವರು ವರದಿಗಾರರಿಗೆ ಹೇಳಿದ್ದಾರೆ.

ದೇಶದಲ್ಲಿ ವಕ್ಫ್ ಆಸ್ತಿ ಸುಮಾರು ಆರು ಲಕ್ಷ ಎಕರೆ ಇದೆ ಎಂದು ಸಂಚಾರ್ ಮಂಡಲಿ ಹೇಳಿತ್ತು ಎಂದು ಅವರು ತಿಳಿಸಿದ್ದಾರೆ.

ವಕ್ಫ್ ಆಸ್ತಿಯ ಅತಿಕ್ರಮಣವನ್ನು ಸರಿಪಡಿಸುವ ಕಾಯ್ದೆ ಸಂಸತ್ತಿನಲ್ಲಿ ಇನ್ನೂ ಬರದೆ ಹೋಗಿರುವುದರ ಬಗ್ಗೆ ಪ್ರಶ್ನಿಸಿದಾಗ "ವೆಂಕಯ್ಯ ನಾಯ್ಡು(ಸಂಸದೀಯ ವ್ಯವಹಾರಗಳ ಸಚಿವ) ಅವರ ಜೊತೆ ಚರ್ಚಿಸಿ ಈ ಕಾಯ್ದೆ ಸಂಸತ್ತಿನಲ್ಲಿ ಚರ್ಚೆಯಾಗುವಂತೆ ನೋಡಿಕೊಳ್ಳುತ್ತೇನೆ. ಈ ಅಧಿವೇಶನದಲ್ಲಿ ಅಲ್ಲವಾದರೂ ಬಜೆಟ್ ಅಧಿವೇಶನದಲ್ಲಿ ಇದು ಜಾರಿಯಾಗುತ್ತದೆ" ಎಂದು ಹೆಪ್ತುಲ್ಲಾ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಮೇಲೂ ದಾಳಿ ಮಾಡಿದ ಅವರು ಆ ಪಕ್ಷದ ಅತಿಗಳಿಂದಲೇ ಮುಸ್ಲಿಮರು ಸಂತ್ರಸತರಾಗಿರುವುದು. ಬಿಜೆಪಿ-ಎನ್ ಡಿ ಎ ಆಡಳಿತ ವೇಳೆಯಲ್ಲಿ ಮುಸ್ಲಿಮರು ಸುರಕ್ಷಿತರಾಗಿದ್ದಾರೆ ಯಾವುದೇ ದಾಳಿಯಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಹೆಫ್ತುಲ್ಲಾ ಉತ್ತರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT