ದೇಶ

ಸ್ಟೀವ್ ಜಾಬ್ಸ್ ರಂತೆ ಕೆಲಸ ಮಾಡಿ:ಉತ್ತರ ಪ್ರದೇಶ ಕೈ ಕಾರ್ಯಕರ್ತರಿಗೆ ರಾಹುಲ್ ಸಲಹೆ

Shilpa D

ಮಥುರಾ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನರ್ ಸ್ಥಾಪನೆ ಮಾಡಲು ಆ್ಯಪಲ್ ಕಂಪನಿಯ ಸ್ಟೀವ್ ಜಾಬ್ಸ್ ಅವರಂತೆ ಕೆಲಸ ಮಾಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

 ಉತ್ತರ ಪ್ರದೇಶದ ಮಥುರಾದ ದೇವಾಲಯಕ್ಕೆ ಭೇಟಿ ನೀಡುವ ಮುನ್ನ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಆ್ಯಪಲ್ ಕಂಪನಿಯ ಸಂಸ್ಥಾಪಕ ಸ್ಚೀವ್ ಜಾಬ್ಸ್ ಅತೀ ಕಡಿಮೆ ಅವಧಿಯಲ್ಲಿ ಹೆಚ್ಚಿನ ಪ್ರಮಾಣದ ಯಶಸ್ಸು ಸಾಧಿಸಿದರು. ಹಾಗೆಯೇ ಭಾರತದಲ್ಲೇ ಅತಿ ಹೆಚ್ಚು ಜನಸಂಖ್ಯೆ ಇರುವ ಉತ್ತರ ಪ್ರದೇಶದಲ್ಲಿ  ನಮ್ಮ ಒಳ್ಳೆಯ ಸಿದ್ದಾಂತಗಳು ನಮ್ಮನ್ನು ನಂ.1 ಆಗಿ ಮಾಡುತ್ತದೆ ಎಂದರು.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮೋದಿ ಅವರು ತಾವು ನೀಡಿದ್ದ ಭರವಸೆಗಳನ್ನು ಮರೆತಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿಯಲ್ಲಿ ಸೋತಿದ್ದಾರೆ. ಎಂದ ಅವರು ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಭಾರತದ ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಅಕೌಂಟ್ ನಲ್ಲಿ 15 ಲಕ್ಷ ಹಣ ಡಿಪಾಸಿಟ್ ಮಾಡುವುದಾಗಿ ನೀಡಿದ್ದ ಭರವಸೆಗಳೆಲ್ಲಾ ಸುಳ್ಳಾಗಿವೆ. ಮೋದಿ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

SCROLL FOR NEXT