ಸೋಮನಾಥ್ ಭಾರ್ತಿ (ಸಂಗ್ರಹ ಚಿತ್ರ) 
ದೇಶ

ಗೃಹ ಹಿಂಸೆ ಪ್ರಕರಣ: ಭಾರ್ತಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ದೆಹಲಿ ಮಾಜಿ ಸಚಿವ ಸೋಮನಾಥ ಭಾರ್ತಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಮತ್ತೆ ವಜಾಗೊಳಿಸಿದೆ...

ನವದೆಹಲಿ: ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ದೆಹಲಿ ಮಾಜಿ ಸಚಿವ ಸೋಮನಾಥ ಭಾರ್ತಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು  ಅರ್ಜಿಯನ್ನು ದೆಹಲಿ ನ್ಯಾಯಾಲಯ ಮತ್ತೆ ವಜಾಗೊಳಿಸಿದೆ.

ಭಾರ್ತಿ ಪರ ವಕೀಲರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ದೆಹಲಿ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಪತ್ನಿ ಲಿಪಿಕಾ ಮಿತ್ರಾ ಅವರ ಮೇಲೆ ದೈಹಿಕ  ಮತ್ತು ಮಾನಸಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಮನಾಥ ಭಾರ್ತಿ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಕೊಲೆ ಪ್ರಯತ್ನ, ದೈಹಿಕ ಹಿಂಸೆ  ಮತ್ತು ಗೃಹ ಹಿಂಸಾಚಾರ ಪ್ರಕರಣದಡಿಯಲ್ಲಿ ಭಾರ್ತಿ ವಿರುದ್ಧ ವಿಪಿಕಾ ಮಿತ್ರಾ ಅವರು ದೂರು ಸಲ್ಲಿಕೆ ಮಾಡಿದ್ದರು. ಈ ಹಿಂದೆ ಸೋಮನಾಥ ಭಾರ್ತಿ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್  ಕೂಡ ದಾಖಲು  ಮಾಡಿಕೊಂಡಿದ್ದರು.

ಕಳೆದ ಜೂನ್ 10ರಂದು ದೆಹಲಿಯ ದ್ವಾರಕಾದಲ್ಲಿರುವ ಉತ್ತರ ವಿಭಾಗದ ಪೊಲೀಸ್ ಠಾಣೆಯಲ್ಲಿ ಸೋಮನಾಥ ಭಾರ್ತಿ ಅವರ ಪತ್ನಿ ಲಿಪಿಕಾ ಮಿತ್ರಾ ಅವರು ದೂರು ಸಲ್ಲಿಕೆ ಮಾಡಿದ್ದರು.   ಸೋಮನಾಥ ಭಾರ್ತಿ ಮದುವೆಯಾದಾಗಿನಿಂದಲೂ ತಮಗೆ ದೈಹಿಕ ಹಿಂಸೆ ನೀಡುತ್ತಿದ್ದರು. ಅಲ್ಲದೆ ಒಮ್ಮೆ ಕೊಲೆಗೂ ಯತ್ನ ನಡೆಸಿದ್ದರು ಎಂದು ದೂರಿದ್ದರು. ಈ ಹಿನ್ನಲೆಯಲ್ಲಿ ಸೋಮನಾಥ   ಭಾರ್ತಿ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT