ಅಸಾವುದ್ದೀನ್ ಒವೈಸಿ 
ದೇಶ

ಭಾರತವನ್ನು ಒಡೆಯುವುದಿಲ್ಲ, ಬಲಿಷ್ಠಗೊಳಿಸುತ್ತೇವೆ: ಅಸಾವುದ್ದೀನ್ ಒವೈಸಿ

ಭಾರತವನ್ನು ಒಡೆಯುವುದಿಲ್ಲ, ಬದಲಾಗಿ ಬಲಿಷ್ಠಗೊಳುಸುತ್ತೇವೆ ಎಂದು ಹೈದರಾಬಾದ್​ನ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮಿನ್ (ಎಂಐಎಂ) ಮುಖಂಡ ಅಸಾವುದ್ದೀನ್ ಒವೈಸಿ ಹೇಳಿದ್ದಾರೆ.

ಹೈದರಾಬಾದ್: ಭಾರತವನ್ನು ಒಡೆಯುವುದಿಲ್ಲ, ಬದಲಾಗಿ ಬಲಿಷ್ಠಗೊಳುಸುತ್ತೇವೆ ಎಂದು ಹೈದರಾಬಾದ್​ನ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮಿನ್ (ಎಂಐಎಂ) ಮುಖಂಡ ಅಸಾವುದ್ದೀನ್ ಒವೈಸಿ ಹೇಳಿದ್ದಾರೆ.
ಮೌಲಾನಾ ಆಜಾದ್ ಉರ್ದು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ವೇಳೆ ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಮಾಡಿದ್ದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಸಾವುದ್ದೀನ್ ಒವೈಸಿ, ಮುಸ್ಲಿಮರಿಗೆ ಭಾರತದಲ್ಲಿ ಗೌರವಾನ್ವಿತರಾಗಿದ್ದಾರೆ ಎಂಬುದನ್ನು ತೋರಿಸುತ್ತೇನೆ ಎಂದು ಹೇಳಿದ್ದಾರೆ.
ಎಂಎಎನ್ ಯುಯು ಬಿಜೆಪಿಗೆ ಪ್ರಚಾರದ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಅಸಾವುದ್ದೀನ್ ಒವೈಸಿ ಹೇಳಿದ್ದಾರೆ. ಶಿಕ್ಷಣದ ಬಗ್ಗೆ ಆಯೋಜಿಸಿದ್ದ ಸಮ್ಮೇಳನದಲ್ಲಿ ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಮಾತನಾಡಿದ್ದರು.  ದೇಶದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರು ಎದುರಿಸುತ್ತಿರುವ ಎಲ್ಲ ತೊಂದರೆಗಳನ್ನು ವಕ್ಫ್ ಆಸ್ತಿಯಿಂದ ಬರುವ ಆದಾಯದಿಂದ ಪರಿಹರಿಸಬಹುದು ಎಂದು ಹೇಳಿದ್ದರು.
ನಜ್ಮಾ ಹೆಫ್ತುಲ್ಲಾ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಒವೈಸಿ, ಮುಸ್ಲಿಮರು ಎದುರಿಸುತ್ತಿರುವ ಬಡತವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದು, ಭಾರತೀಯ ಮುಸ್ಲಿಮರು ಗೌರವಾನ್ವಿತವಾಗಿ ಬದುಕುವಂತಾಗಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT