ಚಂದ್ರಬಾಬು ನಾಯ್ಡು 
ದೇಶ

ಆಂಧ್ರದ ನೂತನ ರಾಜಧಾನಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಸಿಂಗಪೂರ್ ಪ್ರಧಾನಿಗೆ ಆಹ್ವಾನ

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಿಂಗಪೂರ್ ಪ್ರಧಾನಿ ಲೀ ಸೀನ್ ಲೂಂಗ್ ಅವರನ್ನು ಆಂಧ್ರಪ್ರದೇಶದ ನೂತನ ರಾಜಧಾನಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಿಂಗಪೂರ್ ಪ್ರಧಾನಿ ಲೀ ಸೀನ್ ಲೂಂಗ್ ಅವರನ್ನು ಆಂಧ್ರಪ್ರದೇಶದ ನೂತನ ರಾಜಧಾನಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ಮುಂದಿನ ತಿಂಗಳು ಆಂಧ್ರಪ್ರದೇಶದ ನೂತನ ರಾಜಧಾನಿಗೆ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಲಿದೆ. ಸಿಂಗಪೂರ್ ಗೆ ಭೇಟಿ ನೀಡಿರುವ ಚಂದ್ರಬಾಬು ನಾಯ್ಡು ಅಲ್ಲಿನ ಪ್ರಧಾನಿಯನ್ನು ಭೇಟಿ ಮಾಡಿದ್ದು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದಾರೆ. ಆಂಧ್ರಪ್ರದೇಶದ ರಾಜಧಾನಿ ಅಮರಾವತಿಗೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್.22 ರಂದು ಶಂಕುಸ್ಥಾಪನೆ ಮಾಡಲಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಎಸ್ ಈಸ್ವರನ್ ಅವರನ್ನು ಭೇಟಿ ಮಾಡಿರುವ ಚಂದ್ರಬಾಬು ನಾಯ್ಡು, ನೂತನ ರಾಜಧಾನಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ರಾಜಧಾನಿ ಅಭಿವೃದ್ಧಿಗೆ ಸಿಂಗಪೂರ್ ಸರ್ಕಾರ ಈಗಾಗಲೇ ಮೂರು ಮಾಸ್ಟರ್ ಪ್ಲಾನ್ ಗಳನ್ನು ರೂಪಿಸಿದೆ. ಹೊಸ ರಾಜಧಾನಿ ಅಭಿವೃದ್ಧಿಗೆ ಚಂದ್ರಬಾಬು ನಾಯ್ಡು ಸಿಂಗಪೂರ್ ಸರ್ಕಾರದ ನೆರವು ಕೋರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಜೊತೆ ಯಾವುದೇ ವ್ಯವಹಾರಿಕ, ಆತ್ಮೀಯತೆಯಿಲ್ಲ, ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ

ಮತ್ತೆ ಕಬ್ಬನ್‌ ಪಾರ್ಕ್‌ ಮೆಟ್ರೋ ನಿಲ್ದಾಣದಲ್ಲಿ ರೈಲು ಕೈಕೊಟ್ಟಿದ್ದೇಕೆ? ಅಸಲಿ ಕಾರಣ ಬಿಚ್ಚಿಟ್ಟ BMRCL

ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: SIT ತನಿಖೆ ವಿರುದ್ಧ ಅಯೋಧ್ಯೆ ಅರ್ಚಕರು ಆಕ್ರೋಶ; ಸಿಎಂ ಯೋಗಿಗೆ ಹೇಳಿದ್ದೇನು?

ಕೆ ಆರ್ ಪುರ ತ್ರಿವಳಿ ಕೊ*ಲೆ ಪ್ರಕರಣ: ಕೊನೆಗೂ ಪ್ರಿಯಕರ ಕೆನ್ನೆತ್ ಬಂಧನ, ಆರೋಪಿ ಶ್ವೇತಾಗೆ 7 ದಿನ ಪೊಲೀಸ್ ಕಸ್ಟಡಿ

ರಾಜ್ಯದ ಬಹುತೇಕ ಎಲ್ಲಾ ಅಬಕಾರಿ ಅಧಿಕಾರಿಗಳು ಸಂಬಂಧಿಕರ ಹೆಸರಿನಲ್ಲಿ ಬಾರ್ ಲೈಸೆನ್ಸ್ ಹೊಂದಿದ್ದಾರೆ: ED