ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ 
ದೇಶ

ಇವಿಎಂ, ಮತ ಪತ್ರದಲ್ಲಿನ ಚುನಾವಣಾ ಚಿಹ್ನೆ ತೆಗೆದುಹಾಕಿ: ಅಣ್ಣಾ ಹಜಾರೆ

ಮತ ಪತ್ರ ಹಾಗೂ ಇವಿಎಂನಲ್ಲಿರುವ ಚುನಾವಣೆ ಚಿಹ್ನೆಯನ್ನು ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸಾಮಾಜಿಕ ಕಾರ್ಯಕರ್ತ ಅಣ್ಣಾ...

ಮುಂಬೈ: ಮತ ಪತ್ರ ಹಾಗೂ ಇವಿಎಂನಲ್ಲಿರುವ ಚುನಾವಣೆ ಚಿಹ್ನೆಯನ್ನು ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಕೇಳಿಕೊಂಡಿದ್ದಾರೆ.

ರಾಳೆಗಣ್‌ಸಿದ್ದಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಣ್ಣಾ ಹಜಾರೆ, ಓದಲು ಬಾರದ ಮತದಾರರಿಗೆ ಚುನಾವಣಾ ಚಿಹ್ನೆ ಬೇಕಾಗಿತ್ತು. ಆದರೆ ಈಗ ಚುನಾವಣಾ ಆಯೋಗ ಇವಿಎಂನಲ್ಲಿ ಹಾಗೂ ಮತಪತ್ರದಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮುದ್ರಿಸಲು ನಿರ್ಧರಿಸಿರುವುದರಿಂದ ಚಿಹ್ನೆಯ ಅಗತ್ಯ ಇಲ್ಲ ಎಂದಿದ್ದಾರೆ.

ಈ ಸಂಬಂಧ ಆಯೋಗಕ್ಕೆ ಪತ್ರ ಬರೆದಿರುವ ಅಣ್ಣಾ ಹಜಾರೆ ಅವರು, ಇವಿಎಂ ಹಾಗೂ ಮತ ಪತ್ರ ಎರಡರಲ್ಲೂ ಚುನಾವಣಾ ಚಿಹ್ನೆ ಹಾಗೂ ಭಾವಚಿತ್ರ ಎರಡು ಇದ್ದರೆ ಅಭ್ಯರ್ಥಿಗಳಿಗೆ ಗೊಂದಲವಾಗುತ್ತದೆ. ಹೀಗಾಗಿ ಚಿಹ್ನೆ ತೆಗೆದುಹಾಕುವಂತೆ ಕೇಳಿಕೊಂಡಿದ್ದಾರೆ.

ಚುನಾವಣಾ ಚಿಹ್ನೆ ತೆಗೆದು ಹಾಕುವುದರಿಂದ ಮುಕ್ತ ಹಾಗೂ ಪಾರದರ್ಶಕ ಮತದಾನಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದಿದ್ದಾರೆ. ಅಲ್ಲದೆ ಚುನಾವಣಾ ಸುಧಾರಣೆಗಾಗಿ ದೇಶಾದ್ಯಂತ ಪ್ರಚಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT