ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (ಸಂಗ್ರಹ ಚಿತ್ರ) 
ದೇಶ

ಬಿಜೆಪಿಗೆ ಆರ್ ಎಸ್ಎಸ್ ಸುಪ್ರೀಂ ಕೋರ್ಟ್ ಇದ್ದ ಹಾಗೆ: ನಿತೀಶ್ ವ್ಯಂಗ್ಯ

ಭಾರತೀಯ ಜನತಾ ಪಕ್ಷಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ದಳ ಒಂದು ರೀತಿಯ ಸುಪ್ರೀಂ ಕೋರ್ಟ್ ಇದ್ದಂತೆ. ಹೀಗಾಗಿ ಆರ್ ಎಸ್ ಎಸ್ ಏನೇ ಹೇಳಿದರೂ ಬಿಜೆಪಿಯವರು ತಲೆದೂಗುತ್ತಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ...

ಪಾಟ್ನಾ: ಭಾರತೀಯ ಜನತಾ ಪಕ್ಷಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ದಳ ಒಂದು ರೀತಿಯ ಸುಪ್ರೀಂ ಕೋರ್ಟ್ ಇದ್ದಂತೆ. ಹೀಗಾಗಿ ಆರ್ ಎಸ್ ಎಸ್ ಏನೇ ಹೇಳಿದರೂ ಬಿಜೆಪಿಯವರು  ತಲೆದೂಗುತ್ತಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಹಾ ಮೈತ್ರಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಿತೀಶ್ ಕುಮಾರ್ ಅವರು ಬಿಜೆಪಿ  ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಇನ್ನು ಮೀಸಲಾತಿ ಕುರಿತಂತೆ ಮೋಹನ್ ಭಾಗವತ್ ಅವರು ನೀಡಿರುವ ಹೇಳಿಕೆ ಕುರಿತು ಮಾತನಾಡಿದ ನಿತೀಶ್ ಕುಮಾರ್, ಬಿಜೆಪಿ ಪಾಲಿಗೆ  ಆರ್ ಎಸ್ ಎಸ್ ಒಂದು ರೀತಿಯ ಸುಪ್ರೀಂ ಕೋರ್ಟ್ ಇದ್ದಂತೆ. ಹೀಗಾಗಿ ಆರ್ ಎಸ್ ಎಸ್ ಮುಖಂಡರು ಏನೇ ಹೇಳಿದರೂ ಅವರು ತಲೆಯಾಡಿಸುತ್ತಾರೆ. ಮೀಸಲಾತಿ ವಿಚಾರಕ್ಕೆ  ಸಂಬಂಧಿಸಿದಂತೆ ಮೋಹನ್ ಭಾಗವತ್ ಅವರ ಅಭಿಪ್ರಾಯ ಸರಿಯಿಲ್ಲ. ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಲು ಆರ್ ಎಸ್ ಎಸ್ ಹೊಸ ಹೆಚ್ಚುವರಿ ಸಾಂವಿಧಾನಿಕ ಸಮಿತಿ ಬೇಕು ಎಂದು  ಹೇಳುತ್ತಿದೆ.  ಆದರೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಇದು ತುಂಬಾ ಅಪಾಯಕಾರಿ ಯೋಚನೆ ಎಂದು ನಿತೀಶ್ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಬಿಹಾರ ಚುನಾವಣೆ ಕುರಿತು ಮಾತನಾಡಿದ ನಿತೀಶ್ ಕುಮಾರ್ ಅವರು, ಸಮಾಜದ ಎಲ್ಲ ಸಮುದಾಯಗಳನ್ನು ಪರಿಗಣಿಸಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಮಹಾ  ಮೈತ್ರಿಯಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಾಗಲೀ ಅಥವಾ ಸಮಸ್ಯೆ ಮತ್ತು ದೂರುಗಳಿಲ್ಲ. ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಸಾಮಾನ್ಯವಾಗಿ ಹೆಚ್ಚು ಸಮಯ  ತೆಗೆದುಕೊಳ್ಳುತ್ತದೆ. ಅಭ್ಯರ್ಥಿಗಳ ಪಟ್ಟಿಯನ್ನು ನಾನೇ ಬಿಡುಗಡೆ ಮಾಡಲು ಲಾಲು ಪ್ರಸಾದ್ ಅವರು ಸೇರಿದಂತೆ ಎಲ್ಲರೂ ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ. ನಾವು ಒಂದನ್ನಂತೂ  ಪ್ರಜೆಗಳಿಗೆ ಸ್ಪಷ್ಟಪಡಿಸಬೇಕು. ಅದೇನೆಂದರೆ ನಾವು ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಆದರೆ ಬಿಜೆಪಿ ಪಕ್ಷಕ್ಕೆ ಒಡೆದು ಆಳುವುದರಲ್ಲಿಯೇ ಹೆಚ್ಚು ನಂಬಿಕೆ  ಇದೆ ಎಂದು ನಿತೀಶ್ ಹೇಳಿದರು.

ಒಟ್ಟಾರೆ ಬಿಹಾರ ಚುನಾವಣೆಯ ಮತದಾನ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಮುಖಂಡ ಮಾತಿನ ಲಹರಿ ಜೋರಾಗುತ್ತಿದ್ದು, ಚುನಾವಣೆ ಮುಗಿಯುವುದರೊಳಗಾಗಿ ಏನೆಲ್ಲಾ  ತಿರುವು ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT