ಸ್ವಾಮಿ ದಯಾನಂದ ಗಿರಿ ಜೊತೆ ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿ ಆಧ್ಯಾತ್ಮಿಕ ಗುರು ಸ್ವಾಮಿ ದಯಾನಂದ ಗಿರಿ ವಿಧಿವಶ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಧ್ಯಾತ್ಮಿಕ ಗುರು ಸ್ವಾಮಿ ದಯಾನಂದ ಗಿರಿ ರಿಷಿಕೇಶದಲ್ಲಿ ಬುಧನಾರ ಸಂಜೆ ವಿಧಿವಶರಾಗಿದ್ದಾರೆ.....

ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಧ್ಯಾತ್ಮಿಕ ಗುರು ಸ್ವಾಮಿ ದಯಾನಂದ ಗಿರಿ ರಿಷಿಕೇಶದಲ್ಲಿ  ಬುಧನಾರ ಸಂಜೆ ವಿಧಿವಶರಾಗಿದ್ದಾರೆ.

87 ವರ್ಷ ವಯಸ್ಸಿನ ದಯಾನಂದ ಗಿರಿ ಬುಧುವಾರ ರಾತ್ರಿ 10.20 ರ ವೇಳೆಯಲ್ಲಿ ಶ್ರೀಶಾಮ್ಜಾದಿ ಆಶ್ರಮದಲ್ಲಿ ಇಹಲೋಕ ತ್ಯಜಿಸಿದ್ದಾರೆ. ದಯಾನಂದ ಗಿರಿ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಕೆಲ ದಿನಗಳ ಹಿಂದಷ್ಟೇ ಗಿರಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಆಸ್ಪತ್ರೆಯಿಂದ ಕರೆ ತರಲಾಗಿತ್ತು. ಇನ್ನು ದಯಾನಂದ ಗಿರಿ ಅವರ ಅಂತಿಮ ಸಂಸ್ಕಾರ ಸೆಪ್ಟಂಬರ್ 25 ರಂದು ನಡೆಯಲಿದೆ.

ಸೆಪ್ಟಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಆಶ್ರಮಕ್ಕೆ ಭೇಟಿ ನೀಡಿ ಗುರುಗಳ ಆರೋಗ್ಯ ಕ್ಷೇಮ ವಿಚಾರಿಸಿದ್ದರು. ಅಮೆರಿಕಾ ಪ್ರವಾಸದಲ್ಲಿರುವ ಮೋದಿ ಟ್ವಿಟ್ಟರ್ ನಲ್ಲಿ ದಯಾನಂದ ಗುರುಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Union Budget 2026 Live updates | ಆಯವ್ಯಯ ಮಂಡನೆ ಆರಂಭ; 'ಯುವಶಕ್ತಿ ಚಾಲಿತ ಬಜೆಟ್ ಮೂರು ಕರ್ತವ್ಯಗಳಿಂದ ಚಾಲನೆ'

ಕೇಂದ್ರ ಬಜೆಟ್ 2026; ಕೆನ್ನೇರಳೆ ಬಣ್ಣದ ಸೀರೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್; ಏನಿದರ ವಿಶೇಷತೆ..?

ಗಾಜಾ ಮೇಲೆ ಇಸ್ರೇಲ್ ಮತ್ತೆ ವೈಮಾನಿಕ ದಾಳಿ: ಮಕ್ಕಳು ಸೇರಿದಂತೆ 32 ಪ್ಯಾಲೆಸ್ಟೀನಿಯರು ಸಾವು

Gold Rate: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ..!

Hate Speech Bill: ಕಾಯ್ದೆ ಹೆಸರಿನಲ್ಲಿ ನಾಗರಿಕರ ಮೂಲಭೂತ ಹಕ್ಕುಗಳ ಹರಣ ಸರಿಯಲ್ಲ; ಅಂಕಿತಕ್ಕೆ ರಾಜ್ಯಪಾಲ ನಕಾರ, ಮಸೂದೆ ರಾಷ್ಟ್ರಪತಿ ಅಂಗಳಕ್ಕೆ..!

SCROLL FOR NEXT