ಬಾಬಾ ರಾಮ್ ದೇವ್ 
ದೇಶ

ಡೆಂಘೀಗೆ ಗಿಡಮೂಲಿಕೆಯೇ ಮದ್ದು ಎಂಬುದಕ್ಕೆ ವೈಜ್ಞಾನಿಕ ಆಧಾರಗಳೇನೂ ಇಲ್ಲ

ಅಮೃತಬಳ್ಳಿ, ಲೋಳೆಸರ ಮತ್ತು ಪಪ್ಪಾಯ ಎಲೆ ಡೆಂಘೀ ಜ್ವರವನ್ನು ಗುಣಪಡಿಸುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳು ಅಲ್ಲ ಎಂದು ಏಮ್ಸ್...

ನವದೆಹಲಿ: ಅಮೃತಬಳ್ಳಿ, ಲೋಳೆಸರ ಮತ್ತು ಪಪ್ಪಾಯ ಎಲೆಗಳನ್ನು ಡೆಂಘೀ ಔಷಧಿಯನ್ನಾಗಿ ಬಳಸಬಹುದು ಎಂದು ಯೋಗ ಗುರು ಬಾಬಾ ರಾಮ್‌ದೇವ್ ಅವರು ಹೇಳಿದ್ದಾರೆ. ಆದರೆ ಈ ಗಿಡಮೂಲಿಕೆಗಳು ಡೆಂಘೀ ಜ್ವರವನ್ನು ಗುಣಪಡಿಸುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳು ಅಲ್ಲ ಎಂದು  ಏಮ್ಸ್ (ಎಐಐಎಂಎಸ್) ತಜ್ಞರು ಹೇಳಿದ್ದಾರೆ.
ಡೆಂಘೀ ಜ್ವರಕ್ಕೆ ಯಾವುದೇ ಗಿಡಮೂಲಿಕೆಗಳನ್ನು ಬಳಸಬಾರದು. ಗಿಡಮೂಲಿಕೆಗಳಿಂದ ರೋಗ ಗುಣವಾಗುತ್ತದೆ ಎಂಬುದಕ್ಕೆ ವೈಜ್ಞಾನಿಕ ಆಧಾರಗಳಿಲ್ಲ. ಆದ್ದರಿಂದ ಡೆಂಘೀ ಪೀಡಿತರು ಲೋಳೆಸರ, ಪಪ್ಪಾಯ ಎಲೆ ಮತ್ತು ಆಡಿನ ಹಾಲುಗಳನ್ನು ಬಳಸಿ ಎಂದು ನಾವು ಶಿಫಾರಸು ಮಾಡುವುದಿಲ್ಲ. ವೈಜ್ಞಾನಿಕ ಆಧಾರಗಳಿಲ್ಲದೆ ಯಾವುದೇ ಮದ್ದು ಸೇವಿಸಲು ಮುಂದಾಗಬೇಡಿ.  ಕೆಲವೊಂದು ಹಣ್ಣುಗಳು, ಗಿಡಮೂಲಿಕೆಗಳು ಡೆಂಘೀಯನ್ನು ಗುಣಪಡಿಸುತ್ತವೆ ಎಂಬುದು ಇಲ್ಲಿಯವರೆಗೆ ವೈಜ್ಞಾನಿಕವಾಗಿ ಸಾಬೀತು ಪಡಿಸಿಲ್ಲ ಎಂದು ಏಮ್ಸ್ ನ ಮೆಡಿಸಿನ್ ವಿಭಾಗದ ಮುಖ್ಯಸ್ಥ ಎಸ್.ಕೆ ಶರ್ಮಾ ಹೇಳಿದ್ದಾರೆ.
ಆದಾಗ್ಯೂ, ಈ ಎಲ್ಲ ಗಿಡಮೂಲಿಕೆಗಳು ರಕ್ತದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಹೆಚ್ಚಾಗುವಂತೆ ಮಾಡುತ್ತವೆ ಎಂದು ಹೇಳಿದರೂ, ಇವುಗಳು ಡೆಂಘೀ ಗುಣಪಡಿಸುತ್ತವೆ ಎಂದು ಹೇಳುವಂತಿಲ್ಲ ಎಂದು ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT