ವ್ಯಾಪಂ ಹಗರಣದ ವಿರುದ್ಧದ ಪ್ರತಿಭಟನೆಯ ಒಂದು ದೃಶ್ಯ 
ದೇಶ

ವ್ಯಾಪಂ ಹಗರಣ: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಸಿಬಿಐ ದಾಳಿ

ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ ೪೦ ಕಡೆಗಳಲ್ಲಿ ಗುರುವಾರ ಸಿಬಿಐ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ ೪೦ ಕಡೆಗಳಲ್ಲಿ ಗುರುವಾರ ಸಿಬಿಐ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ದಾಳಿ ನಡೆಸಿದ ಪ್ರದೇಶಗಳಲ್ಲಿ ಭೋಪಾಲ್, ಇಂದೋರ್, ಉಜ್ಜೈನ್, ರೇವಾ, ಜಬಲ್ಪುರ, ಲಕನೌ ಮತ್ತು ಅಲ್ಲಹಾಬಾದ್ ಸೇರಿವೆ" ಎಂದು ಸಿಬಿಐ ಅಧಿಕಾರಿ ತಿಳಿಸಿದ್ದಾರೆ.

ಸಿಬಿಐ ಇಲ್ಲಿಯವರೆಗೂ ೮೩ ಎಫ್ ಐ ಆರ್ ಗಳನ್ನು ದಾಖಲಿಸಿದ್ದು, ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ೧೨ ಪ್ರಾಥಮಿಕ ತನಿಖೆಗಳನ್ನು ಪ್ರಾರಂಭಿಸಿದೆ.

ಮಧ್ಯಪ್ರದೇಶದ ನರ್ಕಾರಿ ಕಾಲೇಜು ಮತ್ತು ನೌಕರಿಗಳ ನೇಮಕಾತಿಯಲ್ಲಿ ನಡೆದ ಭಾರಿ ಅವ್ಯವಹಾರ ಹಾಗೂ ಇದಕ್ಕೆ ಸಂಬಧಿಸಿದಂತೆ ೪೦ ಜನ ಮೃತಪಟ್ಟಿರುವುದನ್ನು ಸಿಬಿಐ ತನಿಖೆ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT