ಆರ್.ಕೆ ಸಿಂಗ್ 
ದೇಶ

ಬಿಹಾರ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವಿಚಾರ: ಪಕ್ಷದಲ್ಲಿ ಭುಗಿಲೆದ್ದ ಆಂತರಿಕ ಭಿನ್ನಮತ

ಟಿಕೆಟ್‌ ಹಂಚಿಕೆ ವಿಷಯವಾಗಿ ಬಿಜೆಪಿಯಲ್ಲಿ ಆಂತರಿಕ ಕಲಹ ಭುಗಿಲೆದ್ದಿದೆ. ಕ್ರಿಮಿನಲ್‌ಗಳಿಗೆ ಪಕ್ಷ ಟಿಕೆಟ್‌ ಮಾರಾಟ ಮಾಡುತ್ತಿದೆ ಎಂದು ....

ಪಾಟ್ನಾ:  ಟಿಕೆಟ್‌ ಹಂಚಿಕೆ ವಿಷಯವಾಗಿ ಬಿಜೆಪಿಯಲ್ಲಿ ಆಂತರಿಕ ಕಲಹ ಭುಗಿಲೆದ್ದಿದೆ. ಕ್ರಿಮಿನಲ್‌ಗಳಿಗೆ ಪಕ್ಷ ಟಿಕೆಟ್‌ ಮಾರಾಟ ಮಾಡುತ್ತಿದೆ ಎಂದು ಬಿಹಾರದ ಸಂಸದ ಆರ್.ಕೆ. ಸಿಂಗ್‌ ಆರೋಪಿಸಿದ್ದಾರೆ.

'ಜನಪ್ರಿಯತೆಗಳಿಸಿರುವ ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಲಾಗಿದೆ. ಅಪರಾಧ ಹಿನ್ನೆಲೆಯವರಿಗೆ ಟಿಕೆಟ್‌ ಹಂಚಿಕೆ ಮಾಡಲಾಗಿದೆ. ಇಂಥ ಸಮಯದಲ್ಲಿ ಪಕ್ಷದ ಕಾರ್ಯಕರ್ತರು ಸಿಡಿದೇಳುವುದು ಸಹಜ,'ಎಂದು ಸಿಂಗ್‌ ಹೇಳಿದ್ದಾರೆ.

'ಕೆಟ್ಟ ರಾಜಕೀಯದಿಂದಾಗಿ ಬಿಹಾರದಲ್ಲಿ ಪಕ್ಷಕ್ಕೆ ಹಿನ್ನಡೆ ಆಗಿದೆ. ಆರ್‌ಜೆಡಿ ಹಾಗೂ ಜೆಡಿಯುದಿಂದ ಜಂಗಲ್‌ ರಾಜ್‌ ಪರಿಸ್ಥಿತಿ ಉಂಟಾಗಿದೆ ಎನ್ನುವ ಬಿಜೆಪಿ, ಕುಖ್ಯಾತರಿಗೆ ಟಿಕೆಟ್ ನೀಡುವ ಮೂಲಕ ನಿತೀಶ್‌-ಲಾಲು ಜೋಡಿಗಿಂತ ತಾನು ಬೇರೆ ಅಲ್ಲ ಎಂದು ತೋರಿಸಿದೆ,' ಎಂದು ಅವರು ಕಿಡಿಕಾರಿದ್ದಾರೆ.

'ಈ ವಿಷಯವನ್ನು ಪಕ್ಷದ ಹಿರಿಯ ನಾಯಕ ಸುಶೀಲ್‌ ಮೋದಿ ಅವರ ಗಮನಕ್ಕೆ ತಂದಿದ್ದೇನೆ. ಕ್ರಿಮಿನಲ್‌ಗಳಿಗೆ ಟಿಕೆಟ್‌ ನೀಡಿರುವ ಬಗ್ಗೆ ಪಕ್ಷ ಸಮಜಾಯಿಷಿ ನೀಡಬೇಕು,' ಎಂದು ಅವರು ಆಗ್ರಹಿಸಿದ್ದಾರೆ. .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT