ಸ್ಮೃತಿ ಇರಾನಿ 
ದೇಶ

ಶೋಧನಾ ಸಮಿತಿಯಿಂದ ಜೆಎನ್ ಯು ಕುಲಪತಿ ಆಯ್ಕೆ: ಸ್ಮೃತಿ ಇರಾನಿ ಸ್ಪಷ್ಟನೆ

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ಕುಲಪತಿ ಆಯ್ಕೆ ಶೋಧನಾ ಸಮಿತಿಯಿಂದಲೇ ನಡೆಯುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಲಖನೌ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ಕುಲಪತಿ ಆಯ್ಕೆ ಶೋಧನಾ ಸಮಿತಿಯಿಂದಲೇ ನಡೆಯುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಸುಬ್ರಹ್ಮಣಿಯನ್ ಸ್ವಾಮಿ ಅವರಿಗೆ ಜೆ.ಎನ್.ಯು ಕುಲಪತಿ ಹುದ್ದೆ ನೀಡುವುದರ ಬಗ್ಗೆ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ, ಕಾನೂನು ಗೊತ್ತಿಲ್ಲದ ವ್ಯಕ್ತಿಗಳು ಈ ರೀತಿಯ ವದಂತಿ ಹಬ್ಬಿಸಿದ್ದಾರೆ. ಕೇಂದ್ರ ಸಚಿವರು ಕುಲಪತಿ ಹುದ್ದೆಯನ್ನು ಯಾರಿಗೂ  ನೀಡಲು ಸಾಧ್ಯವಿಲ್ಲ. ಶೋಧನಾ ಸಮಿತಿಯಿಂದಲೇ ಆಯ್ಕೆ ನಡೆಯಬೇಕು ಎಂದು ಹೇಳಿದ್ದಾರೆ.  

ಕುಲಪತಿ ಹುದ್ದೆಗೆ ನೇಮಕಾತಿ ನಡೆಯುವ ವೇಳೆ ವಯಸ್ಸನ್ನು ಪರಿಗಣಿಸಲಾಗುತ್ತದೆ. ಸುಬ್ರಹ್ಮಣಿಯನ್ ಸ್ವಾಮಿ ಹಿರಿಯರಾಗಿದ್ದು, ಅವರು ಕುಲಪತಿ ಹುದ್ದೆಗೆ ಸೂಕ್ತ ವಯೋಮಿತಿಯಲ್ಲಿಲ್ಲ ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ. ಕೆಲ ಎಡಪಂಥೀಯರು  ಭಯಗೊಂಡಿದ್ದು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT