ಸುಬ್ರಹ್ಮಣ್ಯನ್‌ ಸ್ವಾಮಿ 
ದೇಶ

ನೆಹರೂ 'ಥರ್ಡ್‌ ಕ್ಲಾಸ್‌ ಪಾಸ್‌', ಜೆಎನ್‌ಯು ವಿದ್ಯಾರ್ಥಿಗಳು,ಪ್ರಾಧ್ಯಾಪಕರು 'ನಕ್ಸಲರು': ಸುಬ್ರಹ್ಮಣ್ಯನ್‌ ಸ್ವಾಮಿ

ಬಿಜೆಪಿ ನಾಯಕ ಸುಬ್ರಹ್ಮಣ್ಯನ್‌ ಸ್ವಾಮಿ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಪಂಡಿತ್‌ ಜವಾಹರಲಾಲ್‌...

ನವದೆಹಲಿ: ಬಿಜೆಪಿ ನಾಯಕ ಸುಬ್ರಹ್ಮಣ್ಯನ್‌ ಸ್ವಾಮಿ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಪಂಡಿತ್‌ ಜವಾಹರಲಾಲ್‌ ನೆಹರೂ ಅವರು ಥರ್ಡ್‌ ಕ್ಲಾಸ್‌ ಪಾಸ್‌' ಎಂದಿದ್ದ ಸ್ವಾಮಿ, ಈಗ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರನ್ನು ನಕ್ಸಲರು ಎಂದಿದ್ದಾರೆ.

'ವಿದ್ಯಾರ್ಥಿಗಳು ಮಾತ್ರ ಅಲ್ಲ, ಜೆಎನ್ ಯು ಪ್ರಾಧ್ಯಾಪಕರನ್ನು ನಾನು ನಕ್ಸಲರು' ಎಂದು ಕರೆಯುವುದಾಗಿ ಸ್ವಾಮಿ ವರದಿಗಾರರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.

ದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯಕ್ಕೆ ಸುಭಾಶ್ಚಂದ್ರ ಬೋಸ್‌ ಅವರ ಹೆಸರನ್ನು ಇಡಬೇಕೆಂದು ಶಿಫಾರಸು ಮಾಡಿದ್ದೇವೆ. ಕಾರಣ ಬೋಸ್‌ ಒಬ್ಬ ಅತ್ಯುನ್ನತ ಶಿಕ್ಷಣ ಪಡೆದ ಸಾಧಕ; ಆದರೆ ನೆಹರೂ ಒಬ್ಬ ಥರ್ಡ್‌ ಕ್ಲಾಸ್‌ ಪಾಸ್‌ ವ್ಯಕ್ತಿ' ಎಂದು ಸ್ವಾಮಿ ಹೇಳಿದ್ದಾರೆ.

ವರದಿಗಳ ಪ್ರಕಾರ, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಸ್ವಾಮಿ ಅವರಿಗೆ ಜೆಎನ್‌ಯು ಕುಲಪತಿ ಹುದ್ದೆ ನೀಡುವ ಸಾಧ್ಯತೆ ಇದೆ. ಆದರೆ ಸ್ವಾಮಿ ಅವರು ಈ ಹುದ್ದೆ ವಹಿಸಿಕೊಳ್ಳಲು ಕೆಲವು ಶರತ್ತುಗಳನ್ನು ಹಾಕಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT