ನ್ಯಾಯಮೂರ್ತಿ ಹೆಚ್ ಎಲ್ ದತ್ತು (ಸಂಗ್ರಹ ಚಿತ್ರ) 
ದೇಶ

ನ್ಯಾಯಾಧೀಶರ ಬದುಕು ಶೋಚನೀಯ: ಹೆಚ್ ಎಲ್ ದತ್ತು

ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯಾಧೀಶರ ಬದುಕು ಶೋಚನೀಯವಾಗಿದೆ ಎಂದು ಮುಖ್ಯ ನ್ಯಾಯಾಧೀಶ ಹೆಚ್ ಎಲ್ ದತ್ತು ಅವರು ಅಭಿಪ್ರಾಯಪಟ್ಟಿದ್ದಾರೆ...

ನವದೆಹಲಿ: ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯಾಧೀಶರ ಬದುಕು ಶೋಚನೀಯವಾಗಿದೆ ಎಂದು ಮುಖ್ಯ ನ್ಯಾಯಾಧೀಶ ಹೆಚ್ ಎಲ್ ದತ್ತು ಅವರು ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೆಚ್ ಎಲ್ ದತ್ತು ಅವರು, ನ್ಯಾಯಾಂಗ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಕೊಲಿಜಿಯಂ ವ್ಯವಸ್ಥೆಯನ್ನು ಸಮರ್ಥಿಸಿಕೊಂಡರು. ಅಲ್ಲದೆ ಕೊಲಿಜಿಯಂ ವ್ಯವಸ್ಥೆಯಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ನಿಗ್ರಹಕ್ಕೆ ಸಾಕಷ್ಟು ವ್ಯವಸ್ಥೆಗಳಿವೆ ಎಂದು ಹೇಳಿದರು.

"ನ್ಯಾಯಾಧೀಶರ ವಿರುದ್ಧವೇ ಆರೋಪ ಮಾಡುವ ಪ್ರವೃತ್ತಿ ಪ್ರತಿಯೊಂದು ಹೈಕೋರ್ಟ್ ಗಳಲ್ಲಿನ ಕೆಲ ವಕೀಲರಿಗೆ ದೀರ್ಘಕಾಲದ ಅಭ್ಯಾಸವಾಗಿ ಹೋಗಿದೆ. ಹೀಗಾಗಿ ನ್ಯಾಯಾಧೀಶರ ವಿರುದ್ಧ ಅನಾಮಧೇಯ ದೂರುಗಳನ್ನು ಸತತವಾಗಿ ದಾಖಲಿಸುತ್ತಿರುತ್ತಾರೆ. ಸುಳ್ಳು ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಧೀಶರು ಅರಕ್ಷಿತರು (ರಕ್ಷಣೆ ಇಲ್ಲದವರು) ಎಂದು ಈ ವಕೀಲರಿಗೆ ಚೆನ್ನಾಗಿ  ತಿಳಿದಿದೆ. ಹೀಗಾಗಿ ಅವರ ವಿರುದ್ಧ ಸತತವಾಗಿ ಕಲ್ಲೆಸೆಯುವ ಕೆಲಸ ಮಾಡುತ್ತಿರುತ್ತಾರೆ. ನಿಜವಾಗಿ ಹೇಳಬೇಕೆಂದರೆ ನ್ಯಾಯಾಧೀಶರ ಬದುಕು ನಿಜಕ್ಕೂ ಶೋಚನೀಯವಾಗಿದೆ ಎಂದು ಹೆಚ್ ಎಲ್ ದತ್ತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ಹೆಚ್ ಎಲ್ ದತ್ತು ಅವರು ನೇಮಕವಾದಾಗ ಅವರ ವಿರುದ್ಧವೂ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ಪ್ರಮುಖವಾಗಿ ಅಕ್ರಮ  ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಶೇಷ ನ್ಯಾಯಾಲಯ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ನೀಡಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಅವರಿಗೆ ಜಾಮೀನು ನೀಡಿತ್ತು. ಅಂದು ಜಯಲಲಿತಾ ಅವರಿಗೆ ನ್ಯಾ.ಹೆಚ್ ಎಲ್ ದತ್ತು ಅವರು ಜಾಮೀನು ನೀಡಿದ್ದರು. ಆಗಲೂ ಸಹ ಹೆಚ್ ಎಲ್ ದತ್ತು ಅವರ ವಿರುದ್ಧ ಸಾಕಷ್ಟು ಆರೋಪಗಳು  ಕೇಳಿಬಂದಿದ್ದವು. ದತ್ತು ಅವರು 1000 ಕೋಟಿ ಲಂಚ ಪಡೆದು ಜಯಲಲಿತಾ ಅವರಿಗೆ ಜಾಮೀನು ನೀಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT