ಮುಳುಗುತ್ತಿದ್ದವರನ್ನು ರಕ್ಷಣೆ ಮಾಡುತ್ತಿರುವ ದೃಶ್ಯ 
ದೇಶ

ಸಾಂಪ್ರದಾಯಿಕ ಪೇಟ ಬಿಚ್ಚಿ ನೀರಲ್ಲಿ ಮುಳುಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಸಿಖ್ ಯುವಕ

ಸಿಖ್ ಯುವಕನೊಬ್ಬ ತನ್ನ ಸಾಂಪ್ರದಾಯಿಕ ರುಮಾಲು ಬಿಚ್ಚಿ ನೀರು ಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿ ಸಾಹಸ ಮೆರೆದ ಘಟನೆ...

ಸಂಗ್ರೂರ್‌: ಸಿಖ್ ಯುವಕನೊಬ್ಬ ತನ್ನ ಸಾಂಪ್ರದಾಯಿಕ ರುಮಾಲು ಬಿಚ್ಚಿ ನೀರು ಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿ ಸಾಹಸ ಮೆರೆದ ಘಟನೆ ಪಂಜಾಬ್ ನಲ್ಲಿ ನಡೆದಿದೆ.

ಗಣೇಶನ ವಿಸರ್ಜನೆಗೆ ಎಂದು ನಾಲ್ವರು ನೀರಿಗಿಳಿದಿದ್ದರು. ಈ ವೇಳೆ ಆ ನಾಲ್ವರು ನೀರಿನ ಆಳಕ್ಕೆ ಸಿಕ್ಕಿ ಪ್ರಾಣಾಪಾಯಕ್ಕೆ ಸಿಲುಕಿದ್ದರು. ಅಲ್ಲೇ ದಡದಲ್ಲಿದ್ದ ಇಂದ್ರಪಾಲ್ ಸಿಂಗ್ ಎಂಬ ಸಿಖ್ ಯುವಕ ಅವರನ್ನು ರಕ್ಷಿಸಲು ವೈಯರ್ ಎಸೆದಿದ್ದಾನೆ. ಆದರೆ ಅದು ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ಆತ ತನ್ನ ಪೇಟದ ಬಟ್ಟೆಯನ್ನು ಬಿಚ್ಚಿ ಎಸೆದಿದ್ದಾನೆ. ಇದನ್ನು ಹಿಡಿದು ನಾಲ್ವರು ದಡ ಸೇರಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಸಿಖ್ ಜನಾಂಗದ ಸಾಂಪ್ರದಾಯಿಕ ಪೇಟವನ್ನು ಬಿಚ್ಚಿ, ಅದರಿಂದ ನಾಲ್ವರ ಪ್ರಾಣವನ್ನು ರಕ್ಷಿಸುವ ಮೂಲಕ ಇಂದ್ರಪಾಲ್ ಸಿಂಗ್ ಈಗ ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡುತ್ತಿದ್ದಾನೆ. ಹೌದು, ಇವನ ಈ ಸಾಹಸ ವಿಡಿಯೋದಲ್ಲಿ ಚಿತ್ರೀಕರಿಸಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

SCROLL FOR NEXT