ಮುಳುಗುತ್ತಿದ್ದವರನ್ನು ರಕ್ಷಣೆ ಮಾಡುತ್ತಿರುವ ದೃಶ್ಯ 
ದೇಶ

ಸಾಂಪ್ರದಾಯಿಕ ಪೇಟ ಬಿಚ್ಚಿ ನೀರಲ್ಲಿ ಮುಳುಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಸಿಖ್ ಯುವಕ

ಸಿಖ್ ಯುವಕನೊಬ್ಬ ತನ್ನ ಸಾಂಪ್ರದಾಯಿಕ ರುಮಾಲು ಬಿಚ್ಚಿ ನೀರು ಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿ ಸಾಹಸ ಮೆರೆದ ಘಟನೆ...

ಸಂಗ್ರೂರ್‌: ಸಿಖ್ ಯುವಕನೊಬ್ಬ ತನ್ನ ಸಾಂಪ್ರದಾಯಿಕ ರುಮಾಲು ಬಿಚ್ಚಿ ನೀರು ಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿ ಸಾಹಸ ಮೆರೆದ ಘಟನೆ ಪಂಜಾಬ್ ನಲ್ಲಿ ನಡೆದಿದೆ.

ಗಣೇಶನ ವಿಸರ್ಜನೆಗೆ ಎಂದು ನಾಲ್ವರು ನೀರಿಗಿಳಿದಿದ್ದರು. ಈ ವೇಳೆ ಆ ನಾಲ್ವರು ನೀರಿನ ಆಳಕ್ಕೆ ಸಿಕ್ಕಿ ಪ್ರಾಣಾಪಾಯಕ್ಕೆ ಸಿಲುಕಿದ್ದರು. ಅಲ್ಲೇ ದಡದಲ್ಲಿದ್ದ ಇಂದ್ರಪಾಲ್ ಸಿಂಗ್ ಎಂಬ ಸಿಖ್ ಯುವಕ ಅವರನ್ನು ರಕ್ಷಿಸಲು ವೈಯರ್ ಎಸೆದಿದ್ದಾನೆ. ಆದರೆ ಅದು ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ಆತ ತನ್ನ ಪೇಟದ ಬಟ್ಟೆಯನ್ನು ಬಿಚ್ಚಿ ಎಸೆದಿದ್ದಾನೆ. ಇದನ್ನು ಹಿಡಿದು ನಾಲ್ವರು ದಡ ಸೇರಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಸಿಖ್ ಜನಾಂಗದ ಸಾಂಪ್ರದಾಯಿಕ ಪೇಟವನ್ನು ಬಿಚ್ಚಿ, ಅದರಿಂದ ನಾಲ್ವರ ಪ್ರಾಣವನ್ನು ರಕ್ಷಿಸುವ ಮೂಲಕ ಇಂದ್ರಪಾಲ್ ಸಿಂಗ್ ಈಗ ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡುತ್ತಿದ್ದಾನೆ. ಹೌದು, ಇವನ ಈ ಸಾಹಸ ವಿಡಿಯೋದಲ್ಲಿ ಚಿತ್ರೀಕರಿಸಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT