ನಾಪತ್ತೆಯಾದ ಬಾಲಕಿ ಅದಿತಿ (ಸಂಗ್ರಹ) 
ದೇಶ

ವಿಶಾಖಪಟ್ಟಣಂನ ಭೋಗಾಪುರ ಬೀಚ್ ನಲ್ಲಿ ಬಾಲಕಿ ಅದಿತಿ ಶವ ಪತ್ತೆ..!

ಟ್ಯೂಷನ್ ನಿಂದ ಮನೆಗೆ ಮರಳುವ ವೇಳೆ ನಾಪತ್ತೆಯಾಗಿದ್ದ 6 ವರ್ಷದ ಬಾಲಕಿ ಅದಿತಿ ದೇಹ ಭೋಗಾಪುರ ಬೀಚ್ ನಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ...

ವಿಶಾಖಪಟ್ಟಣಂ: ಟ್ಯೂಷನ್ ನಿಂದ ಮನೆಗೆ ಮರಳುವ ವೇಳೆ ನಾಪತ್ತೆಯಾಗಿದ್ದ 6 ವರ್ಷದ ಬಾಲಕಿ ಅದಿತಿ ದೇಹ ಭೋಗಾಪುರ ಬೀಚ್ ನಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ಭೋಗಾಪುರ ಬೀಚ್ ನ ಸ್ಥಳೀಯರು ನೀಡಿರುವ ಮಾಹಿತಿಯಂತೆ ದಿಬ್ಬಲಪಾಲೆಂ ಸನ್ ರೇ ಬೀಚ್ ಬಳಿ ಬಾಲಕಿಯೋರ್ವಳ ಶವ ಪತ್ತೆಯಾಗಿದ್ದು, ಇದು ವಾರದ ಹಿಂದೆ ನಾಪತ್ತೆಯಾಗಿದ್ದ ಬಾಲಕಿ  ಅದಿತಿಯದ್ದಾಗಿರಬಹುದು ಎಂದು ಶಂಕಿಸಲಾಗುತ್ತಿದೆ. ಮೋರಿಗೆ ಬಿದ್ದ ಅದಿತಿ ದೇಹ ಅಲ್ಲಿಂದ ಸಮುದ್ರ ಸೇರಿ ಬೋಗಾಪುರಂ ಬೀಚ್ ಗೆ ಬಂದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.  ಪ್ರಸ್ತುತ ದೊರೆತಿರುವ ಶವದ ಮೇಲೆ ಗುಲಾಬಿ ಬಣ್ಣದ ಬಟ್ಟೆ ಇದ್ದು, ನಾಪತ್ತೆಯಾಗುವ ವೇಳೆ ಅದಿತಿ ಕೂಡ ಗುಲಾಬಿ ಬಣ್ಣದ ಬಟ್ಟೆ ಧರಿಸಿದ್ದಳು ಎಂದು ಹೇಳಲಾಗುತ್ತಿದೆ.

ಪ್ರಸ್ತುತ ಸ್ಥಳೀಯ ಪೊಲೀಸರು ಮತ್ತು ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬಾಲಕಿ ಅದಿತಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಪೋಷಕರು ಬಂದ ಬಳಿಕ ಪ್ರಸ್ತುತ ದೊರೆತಿರುವ  ಶವ ಬಾಲಕಿ ಅದಿತಿಯದ್ದೇ ಅಥವಾ ಇಲ್ಲವೇ ಎಂಬುದು ತಿಳಿಯುತ್ತದೆ.

ಕಳೆದ ಗುರುವಾರ ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಬಾಲಕಿ ಅದಿತಿ ದಿಢೀರ್ ನಾಪತ್ತೆಯಾಗಿದ್ದಳು. ಸ್ಥಳೀಯ ಪೊಲೀಸರು ಕಲೆಹಾಕಿದ ಸಿಸಿಟಿವಿ ದೃಶ್ಯಾವಳಿಯ ಮೇರೆಗೆ ಮತ್ತು  ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಬಾಲಕಿ ಅದಿತಿ ತೆರೆದ ಮೋರಿಗೆ ಬಿದ್ದಿರುವ ಕುರಿತು ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ವಿಶಾಖಪಟ್ಟಣ ಜಿಲ್ಲಾಡಳಿತ ಮತ್ತು ಆಂಧ್ರ ಪ್ರದೇಶ ಸರ್ಕಾರ  ಕಾರ್ಯಾಚರಣೆ ನಡೆಸಿತ್ತು.

ವಿಶಾಖಪಟ್ಟಣಂನ ಕರಾವಳಿ ಪ್ರದೇಶದಲ್ಲಿ ಮತ್ತು  ವಿಶಾಖಪಟ್ಟಣದ ರಾಜಕಾಲುವೆಗಳಲ್ಲಿ ಅದಿತಿ ಪತ್ತೆ ಕಾರ್ಯಾಚರಣೆ ನಡೆಸಲಾಗಿತ್ತು. ಕಾರ್ಯಾಚರಣೆಗಾಗಿ  ನೌಕಾಪಡೆಯ ಹೆಲಿಕಾಪ್ಟರ್ ಅನ್ನು ಕೂಡ ಬಳಕೆ ಮಾಡಲಾಗಿತ್ತು. ಆದರೆ ಸತತ ಒಂದು ವಾರಗಳ ಕಾರ್ಯಾಚರಣೆ ಬಳಿಕವೂ ಅದಿತಿ ದೇಹ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ  ಕಾರ್ಯಾಚರಣೆಯನ್ನು ನಿಲ್ಲಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್