ಕೇಂದ್ರ ಸಚಿವ ಮಹೇಶ್ ಶರ್ಮಾ (ಸಂಗ್ರಹ ಚಿತ್ರ) 
ದೇಶ

ದಾದ್ರಿ ಪ್ರಕರಣಕ್ಕೆ ರಾಜಕೀಯ ಬಣ್ಣ ನೀಡಬೇಡಿ: ಮಹೇಶ್ ಶರ್ಮಾ

ದಾದ್ರಿ ಪ್ರಕರಣವೊಂದು ತಪ್ಪು ತಿಳುವಳಿಕೆಯಿಂದಾಗಿದ್ದು ಇದಕ್ಕೆ ರಾಜಕೀಯ ಬಣ್ಣ ನೀಡಬೇಡಿ ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ಅವರು ಗುರುವಾರ ಹೇಳಿದ್ದಾರೆ...

ನವದೆಹಲಿ: ದಾದ್ರಿ ಪ್ರಕರಣವೊಂದು ತಪ್ಪು ತಿಳುವಳಿಕೆಯಿಂದಾಗಿದ್ದು ಇದಕ್ಕೆ ರಾಜಕೀಯ ಬಣ್ಣ ನೀಡಬೇಡಿ ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ಅವರು ಗುರುವಾರ ಹೇಳಿದ್ದಾರೆ.

ದಾದ್ರಿ ಪ್ರಕರಣ ಸಂಬಂಧ ಇಂದು ಪ್ರತಿಕ್ರಿಯೆ ನೀಡಿರುವ ಅವರು, ಗೋಹತ್ಯೆ ಹಾಗೂ ಮಾಂಸ ಸೇವನೆ ಮಾಡಿದ್ದಾರೆಂದು ದಾದ್ರಿಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ ಪ್ರಕರಣ ನಿಜಕ್ಕೂ ದುರದೃಷ್ಟಕರವಾಗಿದೆ. ವಿರೋಧ ಪಕ್ಷದವರಿಗೆ ಇದೀಗ ಯಾವ ವಿಷಯವೂ ಸಿಕ್ಕಿಲ್ಲ. ಹಾಗಾಗಿ ಅವರಿಗೆ ದಾದ್ರಿ ಪ್ರಕರಣವೊಂದು ಆಹಾರ ಸಿಕ್ಕಂತಾಗಿದೆ. ದಾದ್ರಿ ಪ್ರಕರಣವೊಂದು ತಪ್ಪು ತಿಳುವಳಿಕೆಯಿಂದಾಗಿದ್ದು ಇದಕ್ಕೆ ರಾಜಕೀಯ ಬಣ್ಣ ನೀಡಬೇಡಿ ಎಂದು ಹೇಳಿದ್ದಾರೆ.

ದಾದ್ರಿ ಪ್ರಕರಣವೊಂದು ಅತೀ ಸೂಕ್ಷ್ಮ ಪ್ರಕರಣವಾಗಿದ್ದು, ಈ ಸಂಬಂಧ ವಿರೋಧ ಪಕ್ಷಗಳು ಮಕ್ಕಳ ರೀತಿಯಲ್ಲಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಘಟನೆಗೆ ಸ್ಥಳೀಯ ಆಡಳಿತ ಮಂಡಳಿಗಳು ಜವಾಬ್ದಾರಿಯನ್ನು ಹೊರಬೇಕಿದೆ. ಪ್ರಕರಣವನ್ನು ದೊಡ್ಡದು ಮಾಡಬೇಡಿ. ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ದಾದ್ರಿ ಎಂಬ ಊರಿನಲ್ಲಿ ಹಸುಗಳು ನಾಪತ್ತೆಯಾಗಿದ್ದು, ಈ ಹಸುಗಳನ್ನು ಆ ಊರಿನಲ್ಲಿ ವಾಸವಾಗಿದ್ದ ಮುಸ್ಲಿಂ ಕುಟುಂಬವೊಂದು ಹತ್ಯೆ ಮಾಡಿ ಸೇವನೆ ಮಾಡಿದೆ ಎಂದು ಶಂಕಿಸಿದ ಉತ್ತರ ಪ್ರದೇಶ ದಾದ್ರಿ ಊರಿನಲ್ಲಿದ್ದ ಗುಂಪೊಂದು ಮುಸ್ಲಿಂ ಕುಟುಂಬದ ಮೇಲೆ ದಾಳಿ ಮನೆಯಲ್ಲಿದ್ದ ಮಹಮ್ಮದ್ ಇಕ್ಲಾಕ್ (50) ಎಂಬ ವ್ಯಕ್ತಿಯನ್ನು ಹತ್ಯೆ ಮಾಡಿತ್ತು. ಅಲ್ಲದೇ ಮಹಮ್ಮದ್ ಇಕ್ಲಾಕ್ ನ ಮಗನನ್ನು ಗಂಭೀರವಾಗಿ ಗಾಯಗೊಳಿಸಿತ್ತು. ಪ್ರಕರಣ ಸಂಬಂಧ ಪೊಲೀಸರು ದಾಳಿ ಮಾಡಿದ 6 ಜನರನ್ನು ಬಂಧನಕ್ಕೊಳಪಡಿಸಿತ್ತು. ಪ್ರಕರಣ ಸಂಬಂಧ ಹಲವು ವಿವಾದಗಳು ಸೃಷ್ಟಿಯಾಗಿದ್ದವಲ್ಲದೇ, ಊರಿನಲ್ಲಿ ಗಲಭೆಯೆದ್ದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel