ಮಾಜಿ ಐಎಎಫ್ ಮುಖ್ಯಸ್ಥ ಎಸ್​ಪಿ ತ್ಯಾಗಿ ಮತ್ತು ಚಾಪರ್ ಹಗರಣ (ಸಂಗ್ರಹ ಚಿತ್ರ) 
ದೇಶ

ಇಡಿಯಿಂದ ತ್ಯಾಗಿ ಸಂಬಂಧಿಗಳ ಆಸ್ತಿ ಮುಟ್ಟುಗೋಲು

ಸುಮಾರು 3600 ಕೋಟಿ ರೂಪಾಯಿಗಳ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಐಎಎಫ್ ಮುಖ್ಯಸ್ಥ ಎಸ್​ಪಿ ತ್ಯಾಗಿ ಮತ್ತು ಅವರ ಸಹೋದರ ಸಂಬಂಧಿಗಳ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಮಟ್ಟುಗೋಲು ಹಾಕಿಕೊಂಡಿದೆ...

ನವದೆಹಲಿ: ಸುಮಾರು 3600 ಕೋಟಿ ರೂಪಾಯಿಗಳ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಐಎಎಫ್ ಮುಖ್ಯಸ್ಥ ಎಸ್​ಪಿ ತ್ಯಾಗಿ ಮತ್ತು ಅವರ ಸಹೋದರ ಸಂಬಂಧಿಗಳ  ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಮಟ್ಟುಗೋಲು ಹಾಕಿಕೊಂಡಿದೆ.

ತ್ಯಾಗಿ ಅವರ ಸಹೋದರ ಸಂಬಂಧಿಗಳಿಗೆ ಸೇರಿದೆ ಎಂದು ಹೇಳಲಾಗುತ್ತಿರುವ ರಾಜಧಾನಿ ದೆಹಲಿಯಲ್ಲಿರುವ ಒಟ್ಟು 5 ದುಬಾರಿ ಫ್ಲ್ಯಾಟ್ ಗಳನ್ನು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ  ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿದುಬಂದಿದೆ. ತ್ಯಾಗಿ ಅವರ ಸಹೋದರ ಸಂಬಂಧಿಗಳಾದ ಸಂಜೀವ್, ಸಂದೀಪ್ ಮತ್ತು ರಾಜೀವ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ  ಆದೇಶಗಳನ್ನು ಹೊರಡಿಸಿದ್ದು, ‘ಈ ಪ್ರಕರಣದ ತನಿಖೆಯಿಂದ ತ್ಯಾಗಿ ಸಹೋದರರು ಹೊಂದಿದ್ದ ಈ ಆಸ್ತಿಪಾಸ್ತಿಗಳಿಗೂ ಹಣ ವರ್ಗಾವಣೆ ಹಗರಣಕ್ಕೂ ಸಂಬಂಧ ಇರುವುದು ಕಂಡು ಬಂದಿದೆ. ಈ  ಹಿನ್ನೆಲೆಯಲ್ಲಿ ಅವುಗಳನ್ನು ಕಾನೂನು ಪ್ರಕಾರ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ’ ಎಂದು ಜಾರಿ ನಿರ್ದೇಶನಾಯದ ಮೂಲಗಳು ತಿಳಿಸಿವೆ.

‘ಕಠಿಣ ತನಿಖೆಗಳ ಬಳಿಕ ಸುಮಾರು 6.20 ಕೋಟಿ ರೂಪಾಯಿ ಬೆಲೆಯ ತ್ಯಾಗಿ ಸಹೋದರರ ಐದು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ’ ಎಂದು ಜಾರಿ ನಿರ್ದೇಶನಾಲಯ ತನ್ನ  ಪ್ರಕಟಣೆಯಲ್ಲಿ ತಿಳಿಸಿದೆ. ಗುರಗಾಂವ್​ನ ಐದನೇ ಹಂತದಲ್ಲಿರುವ ಫ್ಲ್ಯಾಟ್, ನೋಯಿಡಾದ ಸೆಕ್ಟರ್ 50ರಲ್ಲಿನ ಎರಡು ಫ್ಲ್ಯಾಟ್​ಗಳು, ದೆಹಲಿಯ ಕೆ.ಜಿ. ರಸ್ತೆಯ ಮಾರುಕಟ್ಟೆ ಸಮೀಪದ ಒಂದು  ಆಸ್ತಿ, ಮತ್ತು ಗಾಜಿಯಾಬಾದ್​ನ ಕೌಶಾಂಬಿಯಲ್ಲಿರುವ ವಾಣಿಜ್ಯ ಕೇಂದ್ರದ 5ನೇ ಅಂತಸ್ತಿನ ಫ್ಲ್ಯಾಟ್ ಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ  ಎಂದು ತಿಳಿದುಬಂದಿದೆ.

ವಿವಿಐಪಿಗಳು ಪ್ರಯಾಣಿಸುವ ಸಲುವಾಗಿ ವಾಯುಸೇನೆ ಖರೀದಿಸಲು ಮುಂದಾಗಿದ್ದ ವಿವಿಐಪಿ ಕಾಪ್ಟರ್ ಒಪ್ಪಂದದಲ್ಲಿ ಅವ್ಯವಹಾರವಾಗಿರುವ ಕುರಿತು ಇಟಲಿ ಅಧಿಕಾರಿಗಳು ತನಿಖೆ  ಕೈಗೊಂಡಿದ್ದರು. ಭಾರತದಲ್ಲಿಯೂ ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯವು ಕಳೆದ ವರ್ಷ ಹಣ ವರ್ಗಾವಣೆ ಕಾಯ್ದೆಯ ಅಡಿಯಲ್ಲಿ ವಿವಿಐಪಿ ಹೆಲಿಕಾಪ್ಟರ್ ಖರೀದಿ  ಹಗರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT