ಬಿಹಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಕೇಂದ್ರ ಸಚಿವ ಅರುಣ್ ಜೇಟ್ಲಿ (ಸಂಗ್ರಹ ಚಿತ್ರ) 
ದೇಶ

"ಮೂರು ಕಾಲಿನ ಓಟ" ಗೆಲ್ಲಲು ಸಾಧ್ಯವಿಲ್ಲ: "ಮಹಾಮೈತ್ರಿ" ವಿರುದ್ಧ ಜೇಟ್ಲಿ ಕಿಡಿ

ಬಿಹಾರ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಆರ್ ಜೆಡಿ, ಜೆಡಿಯು ಮತ್ತು ಕಾಂಗ್ರೆಸ್ ಪಕ್ಷಗಳು ಮಾಡಿಕೊಂಡಿರುವ ಮಹಾಮೈತ್ರಿ ಒಕ್ಕೂಟದ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು, "ಮೂರು ಕಾಲಿನ ಓಟ"ವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದ್ದಾರೆ...

ಪಾಟ್ನಾ: ಬಿಹಾರ ವಿಧಾನ ಸಭಾ ಚುನಾವಣಾ ಹಿನ್ನಲೆಯಲ್ಲಿ ಆರ್ ಜೆಡಿ, ಜೆಡಿಯು ಮತ್ತು ಕಾಂಗ್ರೆಸ್ ಪಕ್ಷಗಳು ಮಾಡಿಕೊಂಡಿರುವ ಮಹಾಮೈತ್ರಿ ಒಕ್ಕೂಟದ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ  ಅರುಣ್ ಜೇಟ್ಲಿ ಅವರು, "ಮೂರು ಕಾಲಿನ ಓಟ"ವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ರಾಜಧಾನಿ ಪಾಟ್ನಾದಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆ ‘ವಿಷನ್ ಡಾಕ್ಯುಮೆಂಟ್’ ಬಿಡುಗಡೆ ಮಾಡಿ ಮಾತನಾಡಿದ ಅರುಣ್ ಜೇಟ್ಲಿ, ಮಹಾಮೈತ್ರಿಕೂಟ  ಗೆಲ್ಲಲು ಸಾಧ್ಯವೇ ಇಲ್ಲ. ಒಂದು ವೇಳೆ ಗೆದ್ದರೆ ರಾಜ್ಯದಲ್ಲಿ ಅರಾಜಕತೆ ಉಂಟಾಗುತ್ತದೆ. ಮಹಾಮೈತ್ರಿಕೂಟ ಅಧಿಕಾರಕ್ಕೆ ಬಂದರೆ ‘ಅರಾಜಕತೆ’ ಮತ್ತು ‘ಕಾಡಿನ ರಾಜ್ಯ’ ಬರುವುದರಲ್ಲಿ  ಸಂಶಯವಿಲ್ಲ ಎಂದು ಹೇಳಿದರು. ಅಲ್ಲದೆ ಮಹಾಮೈತ್ರಿಯು ವಿರೋಧಾಭಾಸಗಳ ಮೈತ್ರಿಕೂಟ ಎಂದು ದೂರಿದ ಅವರು, ಅದರಲ್ಲಿ ಸೇರಿರುವವರೆಲ್ಲರೂ ಸಮಯಸಾಧಕರು. ರಾಜಕೀಯ ಸ್ಥಿರತೆ  ಅವರ ಮೌಲ್ಯವಲ್ಲ. ಅವರು ಗೆದ್ದಲ್ಲಿ ಬಿಹಾರವನ್ನು ಅರಾಜಕತೆಯತ್ತ ತಳ್ಳುವರೇ ಹೊರತು ಬೇರಾವ ಫಲಿತಾಂಶ ಅಸಾಧ್ಯ ಎಂದು ಜೇಟ್ಲಿ ಹೇಳಿದರು.

"ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾತಾಂತ್ರಿಕ ಮೈತ್ರಿಕೂಟವು (ಎನ್​ಡಿಎ) ರಾಜ್ಯದ ಮೇಲಿರುವ ಹಿಂದುಳಿದ ರಾಜ್ಯ ಎಂಬ ಹಣೆಪಟ್ಟಿಯನ್ನು ಅಳಿಸಿ, ರಾಜ್ಯವನ್ನು ಅಭಿವೃದ್ಧಿಯ ಮಾರ್ಗದಲ್ಲಿ  ಮುನ್ನಡೆಸುವುದಾಗಿ ಜೇಟ್ಲಿ ಭರವಸೆ ನೀಡಿದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಉಚಿತ ಲ್ಯಾಪ್ ಟಾಪ್, ದ್ವಿಚಕ್ರವಾಹನ, ಕಲರ್ ಟಿ.ವಿ..!
ಇನ್ನು ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಇಂದು ಬಿಜೆಪಿ ಪಕ್ಷ ಬಿಡುಗಡೆ ಮಾಡಿರುವ ತನ್ನ ಚುನಾವಣಾ ಪ್ರಣಾಳಿಕ "ವಿಷನ್ ಡಾಕ್ಯುಮೆಂಟ್" ನಲ್ಲಿ ಹಲವು ಪ್ರಮುಖ  ವಿಚಾರಗಳನ್ನು ಬಿಂಬಿಸಲಾಗಿದ್ದು, ಬಿಹಾರ ಹಿಂದುಳಿದಿರುವಿಕೆಯನ್ನು ನಿವಾರಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟ್ಯಾಪ್, ಬಾಲಕಿಯರಿಗೆ ದ್ವಿಚಕ್ರವಾಹನಗಳು, ದಲಿತರು ಮತ್ತು  ಮಹಾದಲಿತರಿಗೆ ಕಲರ್ ಟಿವಿಗಳನ್ನು ಒದಗಿಸಲಾಗುವುದು ಎಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT