ದೇಶ

ನಿತೀಶ್ ಕುಮಾರ್ ಮತ್ತೆ ಸಿಎಂ ಆಗಬೇಕೆಂಬುದು ಕೇಜ್ರಿವಾಲ್ ಆಸೆ: ಜೆಡಿಯು

Shilpa D

ನವದೆಹಲಿ: ನಿತೀಶ್ ಕುಮಾರ್ ಮತ್ತೆ ಬಿಹಾರ ಮುಖ್ಯಮಂತ್ರಿಯಾಗಬೇಕೆಂಬುದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಸೆಯಾಗಿದೆ ಎಂದು ಜೆಡಿಯು ತಿಳಿಸಿದೆ.

ಬಿಹಾರ ಜನತೆ ನಿತೀಶ್ ಕುಮಾರ್ ಮತ ನೀಡಬೇಕು ಎಂದು ಕೇಜ್ರಿವಾಲ್ ಹೇಳಿದ್ದರು. ನಂತರ ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆ ಬದಲಿಸಿದ ಕೇಜ್ರಿವಾಲ್ ತಾವು ಬಿಹಾರದಲ್ಲಿ ಯಾವುದೇ ಪಕ್ಷದ ಪರ ಪ್ರಚಾರ ಮಾಡುತ್ತಿಲ್ಲವೆಂದು ಸ್ಪಷ್ಟನೆ ನೀಡಿದ್ದರು ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ,ಸಿ ತ್ಯಾಗಿ ಹೇಳಿದ್ದಾರೆ.

ಮೊದಲೆ ಕಾರ್ಯಕ್ರಮ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಕೇಜ್ರಿವಾಲ್ ಕರೆದಿದ್ದ ಮುಖ್ಯಮಂತ್ರಿಗಳ ಸಭೆಗೆ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ತ್ಯಾಗಿ ತಿಳಿಸಿದ್ದಾರೆ.

ನಿನ್ನೆ ಬಿಹಾರದಲ್ಲಿ ನಡೆದ ಆಡಳಿತ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಕೇಜ್ರಿವಾಲ್ ತಾವು ಬಿಹಾರದಲ್ಲಿ ತಾವು ಯಾವುದೇ ಪಕ್ಷದ ಪರ ಪ್ರಚಾರ ಮಾಡುತ್ತಿಲ್ಲವೆಂದು ಕೇಜ್ರಿವಾಲ್ ಹೇಳಿದ್ದರು.

SCROLL FOR NEXT