ದೇಶೀಯ ಹಸು 
ದೇಶ

ದೇಶೀಯ ಹಸುಗಳ ಹತ್ಯೆಗೆ ನಿಷೇಧ:ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಿಂದ ಕೇಂದ್ರಕ್ಕೆ ನೊಟೀಸ್

ದೇಶೀಯ ಹಸುಗಳನ್ನು ಹತ್ಯೆ ನಿಷೇಧ ವಿಧಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.

ನವದೆಹಲಿ:ದೇಶೀಯ ಹಸುಗಳನ್ನು ಹತ್ಯೆ ನಿಷೇಧ ವಿಧಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ(ಎನ್.ಜಿ.ಟಿ) ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
ನ್ಯಾ.ಯು.ಡಿ ಸಾಳ್ವಿ ಕೃಷಿ ಸಚಿವಾಲಯಕ್ಕೆ ನೊಟೀಸ್ ಜಾರಿ ಮಾಡಿದ್ದು ದೇಶಿ ಹಸುಗಳ ಹತ್ಯೆಗೆ ನಿಷೇಧ ವಿಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅ.30 ರೊಳಗೆ ಪ್ರತಿಕ್ರಿಯೆ ನೀಡಬೇಕೆಂದು ಸೂಚನೆ ನೀಡಿದೆ.
 ಪರಿಸರವಾದಿಯೂ ಆಗಿರುವ ನ್ಯಾಯವಾದಿ ಅಶ್ವಿನಿ ಕುಮಾರ್ ಅವರು ದೇಶಿ ಹಸುಗಳ ಹತ್ಯೆಗೆ ದೇಶಾದ್ಯಂತ ನಿಷೇಧ ವಿಧಿಸಬೇಕೆಂದು ಕೋರಿ ಹಸಿರು ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಿದ್ದರು.
ದೇಶಾದ್ಯಂತ ಸ್ಥಳೀಯ ಗೋವುಗಳ ಸಂತತಿ ಕಡಿಮೆಯಾಗುತ್ತಿದ್ದು, ದೇಶಿ ಹಸುಗಳ ಬದಲಿಗೆ ಹೈಬ್ರೀಡ್ ಹಸುಗಳನ್ನು ಬೆಳೆಸಲಾಗುತ್ತದೆ. ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳು ಜಾನುವಾರುಗಳ ವೈವಿಧ್ಯತೆ ಸಂರಕ್ಷಿಸಲು ಕ್ರಮ ಕೈಗೊಳ್ಳುತ್ತಿವೆ. ಆದರೆ ಭಾರತದಲ್ಲಿ ಸ್ಥಳೀಯ ಹಸುಗಳ ಸಂತತಿ ಅಳಿವಿನ ಅಂಚಿನಲ್ಲಿದ್ದು ಕೇಂದ್ರ, ರಾಜ್ಯ ಸರ್ಕಾರಗಳು ಮೂಕಪ್ರೇಕ್ಷಕನಂತೆ ವರ್ತಿಸುತ್ತಿವೆ ಎಂದು ಅಶ್ವಿನಿ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಗೋಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಹೈಕೋರ್ಟ್ ನೀಡಿರುವ ಆದೇಶದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT