ಕೋಲ್ಕತಾ ಫ್ಲೈ ಓವರ್ ದುರಂತ ಸಂಭವಿಸಿದ ಸ್ಥಳಕ್ಕೆ ರಾಹುಲ್ ಗಾಂಧಿಯವರು ಭೇಟಿ ನೀಡಿರುವ ಚಿತ್ರ 
ದೇಶ

ಫ್ಲೈ ಓವರ್ ದುರಂತ ಸ್ಥಳಕ್ಕೆ ರಾಹುಲ್ ಭೇಟಿ ವಿರುದ್ಧ ಕಿಡಿಕಾರಿದ ಬಿಜೆಪಿ

ಉತ್ತರ ಕೋಲ್ಕತಾದಲ್ಲಿ ಸಂಭವಿಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ...

ನವದೆಹಲಿ: ಉತ್ತರ ಕೋಲ್ಕತಾದಲ್ಲಿ ಸಂಭವಿಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿರುವುದರ ವಿರುದ್ಧ ಬಿಜೆಪಿ ಶನಿವಾರ ಕಿಡಿಕಾರಿದೆ.

ಈ ಕುರಿತಂತೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿದ್ಧಾರ್ಥ್ ನಾಥ್ ಸಿಂಗ್ ಅವರು, ರಾಹುಲ್ ಗಾಂಧಿಯವರು ರಾಜಕೀಯ ವಲಯದಲ್ಲಿ ತಮ್ಮನ್ನು ರಕ್ಷಿಸಿಕೊಳ್ಳುವುದಕ್ಕೆ ಫೋಟೋಗಾಗಿ ಭೇಟಿ ನೀಡುತ್ತಾರೆಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದರಂತೆ ಫ್ಲೈ ಓವರ್ ಕುಸಿತ ಘಟನಾ ಸ್ಥಳಕ್ಕೂ ಫೋಟೋಗಾಗಿಯೇ ಭೇಟಿ ನೀಡಿದ್ದಾರೆಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈ ಹಿಂದೆ ಇದ್ದ ಸಿಪಿಐ(ಎಂ) ಸರ್ಕಾರದ ಅವಧಿಯಲ್ಲಿ ಫ್ಲೈ ಓವರ್ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗಿದೆ. ಇದೀಗ ಫ್ಲೈ ಓವರ್ ಕುಸಿದು ಬಿದ್ದಿದ್ದು, ರಾಹುಲ್ ಗಾಂಧಿಯವರು ನಿರ್ಮಾಣಕಾರರಿಗೆ ಯಾವ ಶಿಕ್ಷೆಯನ್ನು ನೀಡುತ್ತಾರೆ ಹಾಗೂ ಈ ಬಗೆಗಿನ ಅವರ ನಿಲುವಿನ ಕುರಿತಂತೆ ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರನ್ನು ಹೋಲಿಕೆ ಮಾಡಿ ಟೀಕೆ ಮಾಡಿರುವ ಅವರು, ಫ್ಲೈ ಓವರ್ ಕುಸಿದು ಬಿದ್ದಾಗ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿತ್ತು. ಹೀಗಾಗಿ ಬಿಜೆಪಿ ಸಚಿವರು ಕಾರ್ಯಾಚರಣೆಗೆ ಅಡ್ಡಿಯಾಗಬಾರದು ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿರಲಿಲ್ಲ. ಆದರೆ, ಕಾಂಗ್ರೆಸ್ ನಾಯಕರು ಮಾತ್ರ ಭೇಟಿ ನೀಡುವ ಮೂಲಕ ಕಾರ್ಯಾಚರಣೆಗೆ ಮತ್ತಷ್ಟು ತೊಂದರೆನ್ನುಂಟು ಮಾಡಿದ್ದರು ಇದಕ್ಕೆ ರಾಹುಲ್ ಗಾಂಧಿಯವರು ಉತ್ತರಿಸಬೇಕು.

ಘಟನೆ ಸಂಭವಿಸಿದಾಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಎನ್ ಡಿಆರ್ ಎಫ್ ಮತ್ತು ಸೇನಾ ಪಡೆಗೆ ಕಾರ್ಯಾಚರಣೆ ಬಗ್ಗೆ ಸೂಚನೆಗಳನ್ನು ನೀಡುತ್ತಿದ್ದರು. ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಕೂಡ ಕೋಲ್ಕತಾದಲ್ಲೇ ಇದ್ದರು. ಕಾರ್ಯಾಚರಣೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಅವರಾರೂ ಘಟನಾ ಸ್ಥಳಕ್ಕೆ ಭೇಟಿ ನೀಡಿರಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT