ಹುರಿಯತ್ ಕಾನ್ಫರೆನ್ಸ್ ನ ಮಿರ್ವಾಜ್ ಉಮರ್ ಫಾರೂಕ್ 
ದೇಶ

ಭಾರತ-ಪಾಕ್ ನಡುವಿನ ಶಾಂತಿಯುತ ಮಾತುಕತೆಗೆ ಸಹಾಯ ಮಾಡಲು ಸಿದ್ಧ: ಹುರಿಯತ್ ಕಾನ್ಫರೆನ್ಸ್

ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಶಾಂತಿಯುತ ರೀತಿಯಲ್ಲಿ ಬಗೆಹರಿಸಿಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿರುವ ಬೆನ್ನಲ್ಲೇ ಹುರಿಯತ್ ಕಾನ್ಫರೆನ್ಸ್ ಭಾರತಕ್ಕೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದೆ.

ಶ್ರೀನಗರ: ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಶಾಂತಿಯುತ ರೀತಿಯಲ್ಲಿ ಬಗೆಹರಿಸಿಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿರುವ ಬೆನ್ನಲ್ಲೇ ಹುರಿಯತ್ ಕಾನ್ಫರೆನ್ಸ್ ಪಾಕ್- ಭಾರತದ ನಡುವೆ ಶಾಂತಿ ನೆಲೆಸುವಂತೆ ಮಾಡಲು ಅಗತ್ಯ ನೆರವು ನೀಡುವುದಾಗಿ ತಿಳಿಸಿದೆ.
ಕಾಶ್ಮೀರ ವಿವಾದವೂ ಸೇರಿದಂತೆ ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಶಾಂತಿಯುತ ರೀತಿಯಲ್ಲಿ ಬಗೆಹರಿಸಿಕೊಳ್ಳುವುದಕ್ಕೆ ಪ್ರತ್ಯೇಕತಾವಾದಿ ಹುರಿಯತ್ ಕಾನ್ಫರೆನ್ಸ್ ಭಾರತ ಸರ್ಕಾರಕ್ಕೆ ಸಹಾಯ ಮಾಡಲಿದೆ ಎಂದು ಹುರಿಯತ್ ಅಧ್ಯಕ್ಷ ಮಿರ್ವಾಜ್ ಉಮರ್ ಫಾರೂಕ್ ಹೇಳಿದ್ದಾರೆ.
ಭಾರತ- ಪಾಕಿಸ್ತಾನದಲ್ಲಿ ಶಾಂತಿ ನೆಲೆಸಬೇಕೆಂದರೆ ಕಾಶ್ಮೀರ ಸಮಸ್ಯೆ ಅಗತ್ಯವಾಗಿ ಬಗೆಹರಿಯಬೇಕು, ಮಾತುಕತೆ ಮೂಲಕವೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಚ್ಛಿಸುತ್ತಿದ್ದರೆ, ಅವರು ಹೇಳಿದಂತೆಯೇ ನಡೆಯಬೇಕಾಗುತ್ತದೆ ಎಂದು ಫಾರೂಕ್ ಅಭಿಪ್ರಾಯಪಟ್ಟಿದ್ದಾರೆ. ಮಾತುಕತೆ ಮೂಲಕ ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದನ್ನು ಹುರಿಯತ್ ಕಾನ್ಫರೆನ್ಸ್ ಹಿಂದಿನಿಂದಲೂ ಬೆಂಬಲಿಸುತ್ತಿದೆ. ಆದರೆ ಕಾಶ್ಮೀರ ವಿವಾದ ಬಗೆಹರಿಸುವ ವಿಷಯದಲ್ಲಿ ದೆಹಲಿ ಯಾವಾಗಲೂ ಆಕ್ರಮಣಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಮಿರ್ವಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT