ಹುರಿಯತ್ ಕಾನ್ಫರೆನ್ಸ್ ನ ಮಿರ್ವಾಜ್ ಉಮರ್ ಫಾರೂಕ್ 
ದೇಶ

ಭಾರತ-ಪಾಕ್ ನಡುವಿನ ಶಾಂತಿಯುತ ಮಾತುಕತೆಗೆ ಸಹಾಯ ಮಾಡಲು ಸಿದ್ಧ: ಹುರಿಯತ್ ಕಾನ್ಫರೆನ್ಸ್

ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಶಾಂತಿಯುತ ರೀತಿಯಲ್ಲಿ ಬಗೆಹರಿಸಿಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿರುವ ಬೆನ್ನಲ್ಲೇ ಹುರಿಯತ್ ಕಾನ್ಫರೆನ್ಸ್ ಭಾರತಕ್ಕೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದೆ.

ಶ್ರೀನಗರ: ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಶಾಂತಿಯುತ ರೀತಿಯಲ್ಲಿ ಬಗೆಹರಿಸಿಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿರುವ ಬೆನ್ನಲ್ಲೇ ಹುರಿಯತ್ ಕಾನ್ಫರೆನ್ಸ್ ಪಾಕ್- ಭಾರತದ ನಡುವೆ ಶಾಂತಿ ನೆಲೆಸುವಂತೆ ಮಾಡಲು ಅಗತ್ಯ ನೆರವು ನೀಡುವುದಾಗಿ ತಿಳಿಸಿದೆ.
ಕಾಶ್ಮೀರ ವಿವಾದವೂ ಸೇರಿದಂತೆ ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಶಾಂತಿಯುತ ರೀತಿಯಲ್ಲಿ ಬಗೆಹರಿಸಿಕೊಳ್ಳುವುದಕ್ಕೆ ಪ್ರತ್ಯೇಕತಾವಾದಿ ಹುರಿಯತ್ ಕಾನ್ಫರೆನ್ಸ್ ಭಾರತ ಸರ್ಕಾರಕ್ಕೆ ಸಹಾಯ ಮಾಡಲಿದೆ ಎಂದು ಹುರಿಯತ್ ಅಧ್ಯಕ್ಷ ಮಿರ್ವಾಜ್ ಉಮರ್ ಫಾರೂಕ್ ಹೇಳಿದ್ದಾರೆ.
ಭಾರತ- ಪಾಕಿಸ್ತಾನದಲ್ಲಿ ಶಾಂತಿ ನೆಲೆಸಬೇಕೆಂದರೆ ಕಾಶ್ಮೀರ ಸಮಸ್ಯೆ ಅಗತ್ಯವಾಗಿ ಬಗೆಹರಿಯಬೇಕು, ಮಾತುಕತೆ ಮೂಲಕವೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಚ್ಛಿಸುತ್ತಿದ್ದರೆ, ಅವರು ಹೇಳಿದಂತೆಯೇ ನಡೆಯಬೇಕಾಗುತ್ತದೆ ಎಂದು ಫಾರೂಕ್ ಅಭಿಪ್ರಾಯಪಟ್ಟಿದ್ದಾರೆ. ಮಾತುಕತೆ ಮೂಲಕ ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದನ್ನು ಹುರಿಯತ್ ಕಾನ್ಫರೆನ್ಸ್ ಹಿಂದಿನಿಂದಲೂ ಬೆಂಬಲಿಸುತ್ತಿದೆ. ಆದರೆ ಕಾಶ್ಮೀರ ವಿವಾದ ಬಗೆಹರಿಸುವ ವಿಷಯದಲ್ಲಿ ದೆಹಲಿ ಯಾವಾಗಲೂ ಆಕ್ರಮಣಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಮಿರ್ವಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT