ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಪ್ರತಿಕ್ರಿಯೆ ನೀಡುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಫ್ಲೈ ಓವರ್ ದುರಂತ: ಗಾಯಾಳುಗಳನ್ನು ಭೇಟಿ ಮಾಡಿದ ರಾಹುಲ್

ಉತ್ತರ ಕೋಲ್ಕತಾದಲ್ಲಿ ಸಂಭವಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ಕೋಲ್ಕತಾ: ಉತ್ತರ ಕೋಲ್ಕತಾದಲ್ಲಿ ಸಂಭವಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಗಾಯಾಳುಗಳನ್ನು ಭೇಟಿಯಾಗಿರುವುದಾಗಿ ತಿಳಿದುಬಂದಿದೆ.

ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿ ಮಾಡಲು ಕೋಲ್ಕತಾ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿಯವರು ಗಾಯಾಳುಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಸಂಪೂರ್ಣವಾಗಿ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

ಇನ್ನು ಭೇಟಿ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಫ್ಲೈ ಓವರ್ ಪ್ರಕರಣ ದೊಡ್ಡ ದುರಂತವಾಗಿದೆ. ಗಾಯಾಳುಗಳ ಆರೋಗ್ಯ ವಿಚಾರಿಸುವ ಸಲುವಾಗಿ ಇಲ್ಲಿಗೆ ಭೇಟಿ ನೀಡಿದ್ದೇನೆ. ಸಂಕಷ್ಟದಲ್ಲಿರುವವರಿಗೆ ನಮ್ಮಿಂದ ಸಾಧ್ಯವಾದಷ್ಟು ಸಹಾಯಬೇಕಿದ್ದು, ಘಟನೆಯಲ್ಲಿ ಗಾಯಗೊಂಡವರಿಗೆ ಜನರು ಅಗತ್ಯ ಸಹಾಯಗಳನ್ನು ಮಾಡಬೇಕೆಂದು ಕರೆ ನೀಡಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ರಾಜಕೀಯವಾಗಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಉತ್ತರ ಕೊಲ್ಕತ್ತಾದ ಬಾಬಾ ಬಜಾರ್‌ನಲ್ಲಿರುವ ಹಳೆಯ ಗಣೇಶ್ ಟಾಕೀಸ್ (ಗಿರೀಶ್ ಪಾರ್ಕ್) ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ವಿವೇಕಾನಂದ ಫ್ಲೈಓವರ್ ಕುಸಿದು ಬಿದ್ದಿತ್ತು. ಫ್ಲೈ ಓವರ್ ಕುಸಿದ ಪರಿಣಾಮ ಸೇತುವೆ ಕೆಳಗಿದ್ದ ಹಲವು ಸುಮಾರು 24 ಮಂದಿ ಸಾವನ್ನಪ್ಪಿ, ಹಲವರು ಅವಶೇಷಗಳಿಡಿ ಸಿಲುಕಿಕೊಂಡಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು 90ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್