ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಪ್ರತಿಕ್ರಿಯೆ ನೀಡುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಫ್ಲೈ ಓವರ್ ದುರಂತ: ಗಾಯಾಳುಗಳನ್ನು ಭೇಟಿ ಮಾಡಿದ ರಾಹುಲ್

ಉತ್ತರ ಕೋಲ್ಕತಾದಲ್ಲಿ ಸಂಭವಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ಕೋಲ್ಕತಾ: ಉತ್ತರ ಕೋಲ್ಕತಾದಲ್ಲಿ ಸಂಭವಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಗಾಯಾಳುಗಳನ್ನು ಭೇಟಿಯಾಗಿರುವುದಾಗಿ ತಿಳಿದುಬಂದಿದೆ.

ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿ ಮಾಡಲು ಕೋಲ್ಕತಾ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿಯವರು ಗಾಯಾಳುಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಸಂಪೂರ್ಣವಾಗಿ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

ಇನ್ನು ಭೇಟಿ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಫ್ಲೈ ಓವರ್ ಪ್ರಕರಣ ದೊಡ್ಡ ದುರಂತವಾಗಿದೆ. ಗಾಯಾಳುಗಳ ಆರೋಗ್ಯ ವಿಚಾರಿಸುವ ಸಲುವಾಗಿ ಇಲ್ಲಿಗೆ ಭೇಟಿ ನೀಡಿದ್ದೇನೆ. ಸಂಕಷ್ಟದಲ್ಲಿರುವವರಿಗೆ ನಮ್ಮಿಂದ ಸಾಧ್ಯವಾದಷ್ಟು ಸಹಾಯಬೇಕಿದ್ದು, ಘಟನೆಯಲ್ಲಿ ಗಾಯಗೊಂಡವರಿಗೆ ಜನರು ಅಗತ್ಯ ಸಹಾಯಗಳನ್ನು ಮಾಡಬೇಕೆಂದು ಕರೆ ನೀಡಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ರಾಜಕೀಯವಾಗಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಉತ್ತರ ಕೊಲ್ಕತ್ತಾದ ಬಾಬಾ ಬಜಾರ್‌ನಲ್ಲಿರುವ ಹಳೆಯ ಗಣೇಶ್ ಟಾಕೀಸ್ (ಗಿರೀಶ್ ಪಾರ್ಕ್) ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ವಿವೇಕಾನಂದ ಫ್ಲೈಓವರ್ ಕುಸಿದು ಬಿದ್ದಿತ್ತು. ಫ್ಲೈ ಓವರ್ ಕುಸಿದ ಪರಿಣಾಮ ಸೇತುವೆ ಕೆಳಗಿದ್ದ ಹಲವು ಸುಮಾರು 24 ಮಂದಿ ಸಾವನ್ನಪ್ಪಿ, ಹಲವರು ಅವಶೇಷಗಳಿಡಿ ಸಿಲುಕಿಕೊಂಡಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು 90ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT