ಶ್ರೀನಗರದ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರತಿಭಟನೆ 
ದೇಶ

ಟೀಂ ಇಂಡಿಯಾ ಸೋಲು: ಶ್ರೀನಗರ ಎನ್‌ಐಟಿಯಲ್ಲಿ ಸಂಘರ್ಷ

ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಪರಾಭವಗೊಂಡ ಹಿನ್ನಲೆಯಲ್ಲಿ ಶ್ರೀನಗರದ ನ್ಯಾಷನಲ್ ಇನ್ಸಿಟ್ಯೂಟ್ ಆಫ್...

ಶ್ರೀನಗರ: ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಪರಾಭವಗೊಂಡ ಹಿನ್ನಲೆಯಲ್ಲಿ ಶ್ರೀನಗರದ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸಂಘರ್ಷವುಂಟಾಗಿದ್ದು, ಪ್ರಸ್ತುತ ಕಾಲೇಜ್‌ನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಟೀಂ ಇಂಡಿಯಾದ ಪರಾಭವದ ಬಗ್ಗೆ ವಾಗ್ವಾದ ನಡೆದು ವಿದ್ಯಾರ್ಥಿಗಳ ಎರಡು ಗುಂಪಿನ ಮಧ್ಯೆ ಸಂಘರ್ಷವೇರ್ಪಟ್ಟಿತ್ತು. ಶುಕ್ರವಾರ ವಿದ್ಯಾರ್ಥಿಗಳ ನಡುವೆ ಸಂಘರ್ಷವೇರ್ಪಟ್ಟಿದ್ದು, ಮುಂದಿನ ಆದೇಶ ಲಭಿಸುವವರೆಗೆ ಎನ್‌ಐಟಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ಅಧಿಕೃತರು ಹೇಳಿದ್ದಾರೆ. 
ಸೆಮಿಫೈನಲ್‌ನಲ್ಲಿ ಪಂದ್ಯ ಸೋತಿದ್ದಕ್ಕೆ ಕೆಲವೊಂದು ವಿದ್ಯಾರ್ಥಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದರು. ಕಾಶ್ಮೀರದ ವಿದ್ಯಾರ್ಥಿಗಳೇ ಈ ರೀತಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದನ್ನು ಇತರ ರಾಜ್ಯಗಳ ವಿದ್ಯಾರ್ಥಿಗಳು ಪ್ರಶ್ನಿಸಿದಾಗ ಅಲ್ಲಿ ಜಗಳವಾಗಿತ್ತು.
ಆದಾಗ್ಯೂ, ವಿದ್ಯಾರ್ಥಿಗಳ ಜಗಳವನ್ನು ನಿಯಂತ್ರಿಸಲು ಪೊಲೀಸರನ್ನು ಕರೆತರಲಾಗಿತು. ಸಂಘರ್ಷದ ನಡುವೆ ಕಾಲೇಜಿನ ಸ್ವತ್ತುಗಳಿಗೂ ಹಾನಿಯಾಗಿದ್ದು, ಇದೀಗ ಅನಿರ್ದಿಷ್ಟಾವಧಿವರೆಗೆ ಕಾಲೇಜು ಮುಚ್ಚಲು ಕಾಲೇಜು ಅಧಿಕೃತರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT