ಸಾಂದರ್ಭಿಕ ಚಿತ್ರ 
ದೇಶ

ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಹೋಗಿದ್ದ ಬಿಜೆಪಿ ಯುವ ಘಟಕ ನೇತಾರನ ಮೇಲೆ ಗುಂಡು

ಚತ್ತೀಸ್‌ಗಢದ ಬಿಜಾಪುರ್ ಜಿಲ್ಲೆಯಲ್ಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಹೋಗಿದ್ದ ಬಿಜೆಪಿ ಯುವ ಘಟಕ ನೇತಾರನ ಮೇಲೆ ಗುಂಡಿನ ದಾಳಿ...

ರಾಯ್ಪುರ್: ಚತ್ತೀಸ್‌ಗಢದ ಬಿಜಾಪುರ್ ಜಿಲ್ಲೆಯಲ್ಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಹೋಗಿದ್ದ ಬಿಜೆಪಿ ಯುವ ಘಟಕ ನೇತಾರನ ಮೇಲೆ ಗುಂಡಿನ ದಾಳಿ ನಡೆದಿದೆ.
ಭಾನುವಾರ ಬೆಳಗ್ಗೆ ಸರಿಸುಮಾರು 8 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಗೊಳಗಾದ ಬಿಜಾಪುರ್ ಜಿಲ್ಲೆಯ ಬಿಜೆವೈಎಂ ಅಧ್ಯಕ್ಷ ಮುರಳಿ ಕೃಷ್ಣ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಬಿಜಾಪುರ್ ಎಸ್ಪಿ ಕೆ.ಎಲ್ ಧ್ರುವ್ ಹೇಳಿದ್ದಾರೆ.
ದಾಳಿ ನಡೆಸಿದ್ದು ನಕ್ಸಲರು ಎಂದು ಶಂಕಿಸಲಾಗುತ್ತಿದೆ. ದುಷ್ಕರ್ಮಿಗಳು ದೇಸಿ ಗನ್ ಮತ್ತು ಹರಿತವಾದ ಆಯುಧಗಳಿಂದ ನಾಯ್ಡು ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ದುಷ್ಕರ್ಮಿಗಳು ಹಾರಿಸಿದ ಎರಡು ಗುಂಡು ನಾಯ್ಡು ಅವರ ಹೆಗಲಿಗೆ ಮತ್ತು ಸೊಂಟಕ್ಕೆ ತಾಗಿದೆ. ಆಮೇಲೆ ಅವರು ಇನ್ನಷ್ಟು ಹಲ್ಲೆ ನಡೆಸಲು ಮುಂದಾಗಿದ್ದು, ಕೂಡಲೇ ಅಲ್ಲಿದ್ದ ಜನ ನಾಯ್ಡು ಅವರನ್ನು ರಕ್ಷಣೆ ಮಾಡಿದ್ದಾರೆ. 
ಗಂಭೀರ ಗಾಯಗೊಳಗಾದ ನಾಯ್ಡು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯ್ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT