ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ (ಸಂಗ್ರಹ ಚಿತ್ರ) 
ದೇಶ

ಶನಿ ಶಿಂಗ್ಣಾಪುರ ದೇಗುಲದ ಬಳಿ ಮಹಿಳೆಯರ ಪ್ರತಿಭಟನೆ 'ನಾಚಿಕೆಗೇಡು': ಸುಬ್ರಮಣಿಯನ್ ಸ್ವಾಮಿ

ಶನಿ ಶಿಂಗ್ಣಾಪುರ ದೇಗುಲದ ಗರ್ಭಗುಡಿಯನ್ನು ಪ್ರವೇಶಿಸಲು ಶನಿವಾರ ಮಹಿಳೆಯರು ನಡೆಸಿರುವ ಪ್ರತಿಭಟನೆ ನಾಚಿಕೆಗೇಡಿತನವಾಗಿದ್ದು, ಇದರಲ್ಲಿ ಪ್ರಜಾಸತ್ತೀಯತೆ ಎಂಬುದಿಲ್ಲ ಎಂದು...

ನವದೆಹಲಿ: ಶನಿ ಶಿಂಗ್ಣಾಪುರ ದೇಗುಲದ ಗರ್ಭಗುಡಿಯನ್ನು ಪ್ರವೇಶಿಸಲು ಶನಿವಾರ ಮಹಿಳೆಯರು ನಡೆಸಿರುವ ಪ್ರತಿಭಟನೆ ನಾಚಿಕೆಗೇಡಿತನವಾಗಿದ್ದು, ಇದರಲ್ಲಿ ಪ್ರಜಾಸತ್ತೀಯತೆ ಎಂಬುದಿಲ್ಲ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಶನಿ ಶಿಂಗ್ಣಾಪುರ ದೇಗುಲ ಹಳೆಯ ಸಂಪ್ರದಾಯವನ್ನು ಆಚರಿಸುತ್ತಿದೆ. ದೇಗುಲದೊಳಗೆ ಪುರುಷಗಿರುವಂತೆಯೇ ಮಹಿಳೆಯರಿಗೆ ಪ್ರವೇಶ ನೀಡುವುದರ ಕುರಿತಂತೆ ನಾವು ಬೆಂಬಲ ನೀಡುತ್ತೇವೆ. ಆದರೆ, ಮಹಿಳೆಯರು ನಿನ್ನೆ ನಡೆದುಕೊಂಡ ರೀತಿಯ ಪ್ರಚೋಜನೆ ನೀಡುವಂತಿತ್ತು. ಪ್ರತಿಭಟನೆ ನಡೆಸಿದವರು ಪ್ರಜಾಪ್ರಭುತ್ವದ ಪ್ರತಿಭಟನೆಕಾರರಂತಿರಲಿಲ್ಲ. ಯಾವುದೋ ಅಜೆಂಡಾ ಇಟ್ಟುಕೊಂಡು ಬಂದಂತಿತ್ತು ಎಂದು ಹೇಳಿದ್ದಾರೆ.

ಪ್ರತಿಭಟನೆ ನಡೆಸುವುದಕ್ಕೂ ಒಂದು ಪದ್ಧತಿಯಿದೆ. ದೇಗುಲ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದೇ ಆದರೆ, ಸಮಾಧಾನದಿಂದ ಹಿಂದಕ್ಕೆ ಹೋಗಿ ಮುಖ್ಯಮಂತ್ರಿಯವರನ್ನು ಭೇಟಿಯಾಗಬೇಕಿತ್ತು. ನ್ಯಾಯಾಲಯದ ತೀರ್ಪು ನೀಡಿದೆ. ಆದರೂ ನಮಗೆ ವಿರೋಧ ವ್ಯಕ್ತಪಡಿಸುತ್ತಿದೆ. ಕ್ರಮ ಕೈಗೊಳ್ಳುವಂತೆ ಮನವಿ ಮಾಡಬೇಕಿತ್ತು. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಹೇಳಬೇಕಿತ್ತು. ಅದನ್ನು ಬಿಟ್ಟುಕ ತಳ್ಳಾಟ, ನೂಕಾಟ ಮಾಡಿ ಪ್ರತಿಭಟನೆ ನಡೆಸುವುದು ಸರಿಯಲ್ಲ. ಇದು ನಿಜಕ್ಕೂ ನಾಚಿಕೆಗೇಡಿತನದ ಕೆಲಸ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT