ಶಿವಸೇನೆ 
ದೇಶ

ಧಾರ್ಮಿಕ ಶ್ರದ್ಧೆ ವಿಷಯಗಳಿಂದ ನ್ಯಾಯಾಲಯಗಳು ದೂರವಿರಲಿ: ಶಿವಸೇನೆ

ಮುಂಬೈ ಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ, ನ್ಯಾಯಾಲಯಗಳು ಧಾರ್ಮಿಕ ವಿಷಯಗಳಿಂದ ದೂರವಿರಬೇಕು ಎಂದು ಅಭಿಪ್ರಾಯಪಟ್ಟಿದೆ.

ಮುಂಬೈ: ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸುವುದಕ್ಕೆ ಮಹಿಳೆಯರಿಗೂ ಸಮಾನ ಹಕ್ಕಿದೆ ಎಂಬ ಬಾಂಬೆ ಹೈಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ, ನ್ಯಾಯಾಲಯಗಳು ಧಾರ್ಮಿಕ ವಿಷಯಗಳಿಂದ ದೂರವಿರಬೇಕು ಎಂದು ಅಭಿಪ್ರಾಯಪಟ್ಟಿದೆ.
ಧಾರ್ಮಿಕ ವಿಷಯಗಳನ್ನು ನ್ಯಾಯಾಲಯಗಳಿಗೆ ಕೊಂಡೊಯ್ಯಬಾರದು  ಇಂತಹ ವಿಷಯಗಳನ್ನು ಧಾರ್ಮಿಕ ಸಂತರೊಂದಿಗೆ ಚರ್ಚೆ ಮಾಡುವ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಶಿವಸೇನೆ ಸಾಮ್ನಾದ ಸಂಪಾದಕೀಯದಲ್ಲಿ ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರದಲ್ಲಿರುವ ಶಿರಡಿ ಸಾಯಿಬಾಬಾ ಅವರ ಧರ್ಮದ ಬಗ್ಗೆ ಇಂದಿಗೂ ಗೊಂದಲಗಳಿವೆ, ಅಂತಹ ಗೊಂದಲಗಳನ್ನು ನ್ಯಾಯಾಲಯಗಳು ತೀರ್ಮಾನಿಸಲು ಸಾಧ್ಯವಿಲ್ಲ, ಹಾಗೆಯೇ ರಾಮ ನಿಜಕ್ಕೂ ಅಯೋಧ್ಯೆಯಲ್ಲಿಯೇ ಹುಟ್ಟಿದ್ದಾ ಎಂಬ ವಿಷಯದ ಬಗ್ಗೆ ನ್ಯಾಯಾಲಯಗಳು ತೀರ್ಪು ನೀಡಲು ಸಾಧ್ಯವಿಲ್ಲ ಅವೆಲ್ಲವೂ ಧಾರ್ಮಿಕ ನಂಬಿಕೆಗಳ ವಿಷಯವಾಗಿರಲಿದೆ ಎಂದು ಶಿವಸೇನೆ ಹೇಳಿದೆ.
ಶನಿ ಶಿಂಗ್ಣಾಪುರ ದೇವಾಲಯದಲ್ಲಿ ಯಾರಿಗೆ ಪ್ರವೇಶ ನೀಡಬೇಕು ಯಾರಿಗೆ ನೀಡಬಾರದು ಎಂಬ ಬಗ್ಗೆ ದೇವಾಲಯದ ಟ್ರಸ್ಟಿಗಳು, ಗ್ರಾಮಸ್ಥರು, ಭಕ್ತರೇ ನಿರ್ಧರಿಸಬೇಕು ಎಂದು ಶಿವಸೇನೆ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT