ಥಳಿತಕ್ಕೊಳಗಾದ ದಲಿತ ಬಾಲಕರು (ಚಿತ್ರಕೃಪೆ: ಟ್ವಿಟರ್) 
ದೇಶ

ಬೆತ್ತಲೆಗೊಳಿಸಿ ಅಪ್ರಾಪ್ತ ದಲಿತ ಬಾಲಕರಿಗೆ ಥಳಿತ: 6 ಬಂಧನ

ಮೇಲ್ಜಾತಿ ವ್ಯಕ್ತಿಯ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡುತ್ತಿದ್ದಾರೆಂಬ ಆರೋಪದ ಮೇಲೆ ಮೂವರು ದಲಿತ ಅಪ್ರಾಪ್ತ ಬಾಲಕರನ್ನು ರಸ್ತೆ ಮಧ್ಯದಲ್ಲೇ ಅಮಾನವೀಯವಾಗಿ...

ಚಿತ್ತೋರಗಢ್: ಮೇಲ್ಜಾತಿ ವ್ಯಕ್ತಿಯ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡುತ್ತಿದ್ದಾರೆಂಬ ಆರೋಪದ ಮೇಲೆ ಮೂವರು ದಲಿತ ಅಪ್ರಾಪ್ತ ಬಾಲಕರನ್ನು ರಸ್ತೆ ಮಧ್ಯದಲ್ಲೇ ಅಮಾನವೀಯವಾಗಿ ಥಳಿಸಿರುವ ಘಟನೆ ಚಿತ್ತೋರಗಢ್ ನ ಬಸ್ಸಿ ತೆಹ್ಸೀಲ್ ನಲ್ಲಿ ಮಂಗಳವಾರ ನಡೆದಿದೆ.

ಬೈಕ್ ಕಳ್ಳತನ ಮಾಡುತ್ತಿದ್ದಾರೆಂಬ ಆರೋಪದ ಮೇಲೆ ಮೂವರು ದಲಿತ ಬಾಲಕರ ಮೇಲೆ ಮುಗಿ ಬಿದ್ದಿದ್ದ ಅಲ್ಲಿನ ಸ್ಥಳೀಯರು, ಬಾಲಕರನ್ನು ಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿ ಮನ ಬಂದಂತೆ ಥಳಿಸಿದ್ದಾರೆ. ಆಕ್ರೋಶಿತ ಜನರ ಥಳಿತದಿಂದ ನೋವಿನಿಂದ ಚೀರುತ್ತಿದ್ದ ಬಾಲಕರು ಸಹಾಯಕ್ಕಾಗಿ ಮೊರೆ ಇಟ್ಟರಾದರೂ ಯಾರೊಬ್ಬರು ಅವರನ್ನು ಬಿಡಿಸುವ ಪ್ರಯತ್ನವನ್ನು ಮಾಡಿಲ್ಲ.

ಅಲ್ಲದೆ, ಘಟನೆ ಸಂಬಂಧ ಥಳಿಕ್ಕೊಳಗಾದ ಬಾಲಕರ ವಿರುದ್ಧವೇ ಸ್ಥಳೀಯರು ಪೊಲೀಸರ ಬಳಿ ಪ್ರಕರಣವನ್ನು ದಾಖಲಿಸಿದ್ದಾರೆ. ಸಾಮಾಜಿಕ ತಾಲತಾಣಗಳಲ್ಲಿ ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ಎಸ್'ಸಿ/ಎಸ್'ಟಿ ಕಾಯ್ದೆ ಅಡಿಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT