ಥಳಿತಕ್ಕೊಳಗಾದ ದಲಿತ ಬಾಲಕರು (ಚಿತ್ರಕೃಪೆ: ಟ್ವಿಟರ್) 
ದೇಶ

ಬೆತ್ತಲೆಗೊಳಿಸಿ ಅಪ್ರಾಪ್ತ ದಲಿತ ಬಾಲಕರಿಗೆ ಥಳಿತ: 6 ಬಂಧನ

ಮೇಲ್ಜಾತಿ ವ್ಯಕ್ತಿಯ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡುತ್ತಿದ್ದಾರೆಂಬ ಆರೋಪದ ಮೇಲೆ ಮೂವರು ದಲಿತ ಅಪ್ರಾಪ್ತ ಬಾಲಕರನ್ನು ರಸ್ತೆ ಮಧ್ಯದಲ್ಲೇ ಅಮಾನವೀಯವಾಗಿ...

ಚಿತ್ತೋರಗಢ್: ಮೇಲ್ಜಾತಿ ವ್ಯಕ್ತಿಯ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡುತ್ತಿದ್ದಾರೆಂಬ ಆರೋಪದ ಮೇಲೆ ಮೂವರು ದಲಿತ ಅಪ್ರಾಪ್ತ ಬಾಲಕರನ್ನು ರಸ್ತೆ ಮಧ್ಯದಲ್ಲೇ ಅಮಾನವೀಯವಾಗಿ ಥಳಿಸಿರುವ ಘಟನೆ ಚಿತ್ತೋರಗಢ್ ನ ಬಸ್ಸಿ ತೆಹ್ಸೀಲ್ ನಲ್ಲಿ ಮಂಗಳವಾರ ನಡೆದಿದೆ.

ಬೈಕ್ ಕಳ್ಳತನ ಮಾಡುತ್ತಿದ್ದಾರೆಂಬ ಆರೋಪದ ಮೇಲೆ ಮೂವರು ದಲಿತ ಬಾಲಕರ ಮೇಲೆ ಮುಗಿ ಬಿದ್ದಿದ್ದ ಅಲ್ಲಿನ ಸ್ಥಳೀಯರು, ಬಾಲಕರನ್ನು ಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿ ಮನ ಬಂದಂತೆ ಥಳಿಸಿದ್ದಾರೆ. ಆಕ್ರೋಶಿತ ಜನರ ಥಳಿತದಿಂದ ನೋವಿನಿಂದ ಚೀರುತ್ತಿದ್ದ ಬಾಲಕರು ಸಹಾಯಕ್ಕಾಗಿ ಮೊರೆ ಇಟ್ಟರಾದರೂ ಯಾರೊಬ್ಬರು ಅವರನ್ನು ಬಿಡಿಸುವ ಪ್ರಯತ್ನವನ್ನು ಮಾಡಿಲ್ಲ.

ಅಲ್ಲದೆ, ಘಟನೆ ಸಂಬಂಧ ಥಳಿಕ್ಕೊಳಗಾದ ಬಾಲಕರ ವಿರುದ್ಧವೇ ಸ್ಥಳೀಯರು ಪೊಲೀಸರ ಬಳಿ ಪ್ರಕರಣವನ್ನು ದಾಖಲಿಸಿದ್ದಾರೆ. ಸಾಮಾಜಿಕ ತಾಲತಾಣಗಳಲ್ಲಿ ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ಎಸ್'ಸಿ/ಎಸ್'ಟಿ ಕಾಯ್ದೆ ಅಡಿಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆ

ವಿಬಿ-ಜಿ ರಾಮ್ ಜಿ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಪ್ರಧಾನಿ ಮೋದಿ ಹೆದರಿದ್ದು, ದೇಶವನ್ನೇ ಮಾರಿದ್ದಾರೆ: ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ರಾಹುಲ್ ಗಾಂಧಿ ಟೀಕೆ

ಸಿನಿ ಪ್ರಿಯರಿಗೆ ಈ ವಾರ ಭರ್ಜರಿ ಸುದ್ದಿ: 5 ಬಹು ನಿರೀಕ್ಷಿತ ಚಿತ್ರಗಳು OTTಗೆ ಲಗ್ಗೆ, 4 ಸೂಪರ್ ಹಿಟ್!

ಆರು ಕ್ಷೇತ್ರಗಳ ಚುನಾವಣಾ ಉಸ್ತುವಾರಿಗೆ ಅಣ್ಣಾಮಲೈ ರಾಜೀನಾಮೆ; ಕಾರಣವೇನು?

SCROLL FOR NEXT