ಥಳಿತಕ್ಕೊಳಗಾದ ದಲಿತ ಬಾಲಕರು (ಚಿತ್ರಕೃಪೆ: ಟ್ವಿಟರ್) 
ದೇಶ

ಬೆತ್ತಲೆಗೊಳಿಸಿ ಅಪ್ರಾಪ್ತ ದಲಿತ ಬಾಲಕರಿಗೆ ಥಳಿತ: 6 ಬಂಧನ

ಮೇಲ್ಜಾತಿ ವ್ಯಕ್ತಿಯ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡುತ್ತಿದ್ದಾರೆಂಬ ಆರೋಪದ ಮೇಲೆ ಮೂವರು ದಲಿತ ಅಪ್ರಾಪ್ತ ಬಾಲಕರನ್ನು ರಸ್ತೆ ಮಧ್ಯದಲ್ಲೇ ಅಮಾನವೀಯವಾಗಿ...

ಚಿತ್ತೋರಗಢ್: ಮೇಲ್ಜಾತಿ ವ್ಯಕ್ತಿಯ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡುತ್ತಿದ್ದಾರೆಂಬ ಆರೋಪದ ಮೇಲೆ ಮೂವರು ದಲಿತ ಅಪ್ರಾಪ್ತ ಬಾಲಕರನ್ನು ರಸ್ತೆ ಮಧ್ಯದಲ್ಲೇ ಅಮಾನವೀಯವಾಗಿ ಥಳಿಸಿರುವ ಘಟನೆ ಚಿತ್ತೋರಗಢ್ ನ ಬಸ್ಸಿ ತೆಹ್ಸೀಲ್ ನಲ್ಲಿ ಮಂಗಳವಾರ ನಡೆದಿದೆ.

ಬೈಕ್ ಕಳ್ಳತನ ಮಾಡುತ್ತಿದ್ದಾರೆಂಬ ಆರೋಪದ ಮೇಲೆ ಮೂವರು ದಲಿತ ಬಾಲಕರ ಮೇಲೆ ಮುಗಿ ಬಿದ್ದಿದ್ದ ಅಲ್ಲಿನ ಸ್ಥಳೀಯರು, ಬಾಲಕರನ್ನು ಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿ ಮನ ಬಂದಂತೆ ಥಳಿಸಿದ್ದಾರೆ. ಆಕ್ರೋಶಿತ ಜನರ ಥಳಿತದಿಂದ ನೋವಿನಿಂದ ಚೀರುತ್ತಿದ್ದ ಬಾಲಕರು ಸಹಾಯಕ್ಕಾಗಿ ಮೊರೆ ಇಟ್ಟರಾದರೂ ಯಾರೊಬ್ಬರು ಅವರನ್ನು ಬಿಡಿಸುವ ಪ್ರಯತ್ನವನ್ನು ಮಾಡಿಲ್ಲ.

ಅಲ್ಲದೆ, ಘಟನೆ ಸಂಬಂಧ ಥಳಿಕ್ಕೊಳಗಾದ ಬಾಲಕರ ವಿರುದ್ಧವೇ ಸ್ಥಳೀಯರು ಪೊಲೀಸರ ಬಳಿ ಪ್ರಕರಣವನ್ನು ದಾಖಲಿಸಿದ್ದಾರೆ. ಸಾಮಾಜಿಕ ತಾಲತಾಣಗಳಲ್ಲಿ ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ಎಸ್'ಸಿ/ಎಸ್'ಟಿ ಕಾಯ್ದೆ ಅಡಿಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ.29'ರ ಬೆಳಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ; ಕುತೂಹಲ ಕೆರಳಿಸಿದ CM, DCM ಬ್ರೇಕ್​ಫಾಸ್ಟ್ ಮೀಟಿಂಗ್

ಅಲ್ ಫಲಾಹ್ ಸ್ಥಾಪಕರಿಂದ ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಸ್ವಾಧೀನ : ತನಿಖೆಯಲ್ಲಿ ಬಯಲು

ಕೇರಳ: ಕೈಕೊಟ್ಟ ಕ್ರೇನ್, ಸ್ಕೈ ಡಿನ್ನಿಂಗ್ ಗಾಗಿ 150 ಅಡಿ ಎತ್ತರ ಇದ್ದವರ ಜೀವ ಉಳಿದಿದ್ದೇ ಹೆಚ್ಚು!

CM ಪಟ್ಟಕ್ಕಾಗಿ ಫೈಟ್: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಚಿಂತನೆ

ಪುಟಿದೆದ್ದ ಭಾರತದ ಆರ್ಥಿಕ ಬೆಳವಣಿಗೆ; ಆದರೆ ದ್ವಿತೀಯಾರ್ಧದಲ್ಲಿ ನಿಧಾನಗತಿಯ ಬಗ್ಗೆ ತಜ್ಞರ ಎಚ್ಚರಿಕೆ

SCROLL FOR NEXT