ಭಾರತಕ್ಕೆ ಭೇಟಿ ನೀಡಿದ್ದ ಪಾಕ್ ತಂಡ 
ದೇಶ

ನಮ್ಮ ಬಳಿ ಬಲವಾದ ಸಾಕ್ಷ್ಯಗಳಿವೆ: ಪಾಕ್ ಮಾಧ್ಯಮದ ವರದಿಯನ್ನು ತಳ್ಳಿ ಹಾಕಿದ ಭಾರತ

ಪಠಾಣ್ ಕೋಟ್ ವಾಯು ನೆಲೆ ಮೇಲೆ ಜನವರಿ 2ರಂದು ನಡೆದ ದಾಳಿಯಲ್ಲಿ ಜೈಶ್ ಇ ಮೊಹಮ್ಮದ್ ಸಂಘಟನೆ

ನವದೆಹಲಿ/ಇಸ್ಲಾಮಾಬಾದ್: ಪಠಾಣ್ ಕೋಟ್ ವಾಯು ನೆಲೆ ಮೇಲೆ ಜನವರಿ 2ರಂದು ನಡೆದ ದಾಳಿಯಲ್ಲಿ ಜೈಶ್ ಇ ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನ ಕೈವಾಡವಿರುವುದರ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಬಳಿ ಬಲವಾದ ಸಾಕ್ಷ್ಯಾಧಾರಗಳಿಲ್ಲ ಎಂಬ ಪಾಕಿಸ್ತಾನದ ವರದಿಯನ್ನು ಭಾರತದ ಅಧಿಕಾರಿಗಳು ಮಂಗಳವಾರ ತಳ್ಳಿ ಹಾಕಿದ್ದಾರೆ.

ಪಾಕಿಸ್ತಾನ ಕೋರ್ಟ್ ನಲ್ಲಿ ಕೂಡ ಸಾಬೀತುಪಡಿಸುವಷ್ಟು ಬಲವಾದ ಸಾಕ್ಷಿಗಳು ಭಾರತದಲ್ಲಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಉಗ್ರರ ದಾಳಿ ಪ್ರಕರಣ ಪಾಕಿಸ್ತಾನದ ತೇಜೋವಧೆ ಮಾಡಲು ಭಾರತ ರೂಪಿಸಿದ ನಾಟಕ ಎಂದು ಪಾಕಿಸ್ತಾನದ ಜಂಟಿ ತನಿಖಾ ತಂಡ ಭಾರತಕ್ಕೆ ಬಂದು ಹೋದ ಮೇಲೆ ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದ್ದು, ಇದು ಪಾಕಿಸ್ತಾನ ಮಿಲಿಟರಿಯ ಈಗೊಂದು ಮತ್ತೊಂದು ಆಡುವ ಎರಡು ನಾಲಗೆ ಬುದ್ದಿಯನ್ನು ತೋರಿಸುತ್ತದೆ ಎಂದು ಭಾರತ ಸರ್ಕಾರದ ಮೂಲಗಳು ಹೇಳಿವೆ.

ಪಾಕಿಸ್ತಾನ ಸೇರಿದಂತೆ ಯಾವುದೇ ಅಂತಾರಾಷ್ಟ್ರೀಯ ನ್ಯಾಯಾಲಯಗಳಲ್ಲಿಯೂ ಸಾಬೀತುಪಡಿಸುವ ಸಾಕ್ಷ್ಯಗಳು ನಮ್ಮಲ್ಲಿವೆ. ಪಾಕಿಸ್ತಾನದಿಂದ ಬಂದ ಜಂಟಿ ತನಿಖಾ ತಂಡಕ್ಕೆ ನಾವು, ಈ ಕೇಸಿನಲ್ಲಿ ಮಸೂದ್ ಅಜರ್ ನನ್ನು ಬಂಧಿಸಬೇಕೆಂದು ನಾವು ಹೇಳಿದ್ದೇವೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ರಾಷ್ಟ್ರೀಯ ತನಿಖಾ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತಕ್ಕೆ ಭೇಟಿ ನೀಡಿದ ಪಾಕ್ ತಂಡ ಎಲ್ಲಾ ಸಾಕ್ಷ್ಯಗಳನ್ನು ತೆಗೆದುಕೊಂಡು ಹೋಗಿದೆ. ಅದು ಪಾಕಿಸ್ತಾನದ ಕಾನೂನಿನ ಪ್ರಕಾರ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರಿಂದ ಆ ದೇಶಕ್ಕೆ ಬೇಕಾದಂತೆ ವರದಿ ನೀಡುತ್ತದೆ ಎಂದರು.

ಪಾಕಿಸ್ತಾನ ಮಾಧ್ಯಮದ ವರದಿಯನ್ನು ''ಇದೊಂದು ಒಟ್ಟು ಸಮ್ಮಿಶ್ರಣವಾಗಿದ್ದು'' ಪಾಕಿಸ್ತಾನ ಗೊಂದಲ ಸೃಷ್ಟಿಸಲು ಬಯಸುತ್ತದೆ.ಆದರೆ ಭಾರತ ಆ ಮೋಸದ ಬಲೆಗೆ ಬೀಳುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದೆ ಮತ್ತು ತಾವು ಭೇಟಿ ನೀಡಿದ ಸಂದರ್ಭದಲ್ಲಿ ಭಾರತದ ಅಧಿಕಾರಿಗಳು ಸಹಕಾರ ನೀಡಲಿಲ್ಲ ಎಂಬ ಪಾಕ್ ತಂಡದ ಆರೋಪವನ್ನು ಕೂಡ ಭಾರತ ತಳ್ಳಿ ಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT