ಸುಪ್ರೀಂಕೋರ್ಟ್ ಮತ್ತು ಮ್ಯಾಗಿ ನೂಡಲ್ಸ್ 
ದೇಶ

ಮ್ಯಾಗಿ ವಿವಾದ: ಸುಪ್ರೀಂಗೆ ವರದಿ ಸಲ್ಲಿಸಿದ ಮೈಸೂರು ಪ್ರಯೋಗಾಲಯ

ನಿಷೇಧ ತೆರವಿನ ನಂತರ ಮತ್ತೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದ ಮ್ಯಾಗಿ ನ್ಯೂಡಲ್ಸ್ ನ್ನು ಮರುಪರೀಕ್ಷೆ ಮಾಡುವಂತೆ ತಿಳಿಸಿದ್ದ ಸುಪ್ರೀಂನ ಸೂಚನೆಯಂತೆಯೇ ಇದೀಗ ಕರ್ನಾಟಕದ ಮೈಸೂರು...

ನವದೆಹಲಿ: ನಿಷೇಧ ತೆರವಿನ ನಂತರ ಮತ್ತೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದ ಮ್ಯಾಗಿ ನ್ಯೂಡಲ್ಸ್ ನ್ನು ಮರುಪರೀಕ್ಷೆ ಮಾಡುವಂತೆ ತಿಳಿಸಿದ್ದ ಸುಪ್ರೀಂನ ಸೂಚನೆಯಂತೆಯೇ ಇದೀಗ ಕರ್ನಾಟಕದ ಮೈಸೂರು ಪ್ರಯೋಗಾಲಯವು ಸುಪ್ರೀಂಕೋರ್ಟ್ ಗೆ ಮಂಗಳವಾರ ವರದಿ ಸಲ್ಲಿಸಿದೆ.

ಮ್ಯಾಗಿ ವಿವಾದ ಕುರಿತಂತೆ ಇಂದು ಸುಪ್ರೀಂನಲ್ಲಿ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ಮೈಸೂರು ಪ್ರಯೋಗಾಲಯ ತನ್ನ ವರದಿಯನ್ನು ಸುಪ್ರೀಂಗೆ ಸಲ್ಲಿಸಿದೆ. ಈ ವೇಳೆ ಮಾತನಾಡಿರುವ ನೆಸ್ಲೆ ಕಂಪನಿಯು ಮಾರುಕಟ್ಟೆಗೆ ಮತ್ತೆ ಕಾಲಿಟ್ಟಿರುವ ಮ್ಯಾಗಿಯಲ್ಲಿ ಗ್ಲುಟಮೇಟ್ (ಎಂಎಸ್ ಜಿ) ಇರುವುದಾಗಿ ವರದಿಗಳು ತಿಳಿಸಿಲ್ಲ ಎಂದು ಆಹಾರ ಇಲಾಖೆ ಒಪ್ಪಿಕೊಂಡಿದೆ. ನೆಸ್ಲೆ ಕಂಪನಿ ತನ್ನ ಗುಣಮಟ್ಟವನ್ನು ಉಳಿಸಿಕೊಂಡು ಬರುತ್ತಿದೆ ಎಂದು ಹೇಳಿದೆ. ವಾದ ವಿವಾದಗಳನ್ನು ಆಲಿಸಿದ ಸುಪ್ರೀಂ ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ.

ಈ ಹಿಂದಷ್ಟೇ ವಿಷಕಾರಿ ಅಂಶ ಪತ್ತೆಯಾಗಿ ನಿಷೇಧಕ್ಕೆ ಒಳಗಾಗಿದ್ದ ನೆಸ್ಲೆ ಸಂಸ್ಥೆ ಮ್ಯಾಗಿ ನೂಡಲ್ಸ್ ಮೇಲಿನ ನಿಷೇಧ ತೆರವಿನ ಬಳಿಕ ನೂತನವಾಗಿ ಮಾರುಕಟ್ಟೆಗೆ ಬಂದಿರುವ ಮ್ಯಾಗಿ ನ್ಯೂಡಲ್ಸ್'ನ ಮರುಪರೀಕ್ಷೆ ವರದಿಯನ್ನು 8 ವಾರದೊಳಗಾಗಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸುಪ್ರೀಂ ಮೈಸೂರು ಲ್ಯಾಬೋರೇಟರಿಗೆ ಸೂಚನೆ ನೀಡಿತ್ತು.

ನೆಸ್ಲೆ ಸಂಸ್ಥೆಯ ಖ್ಯಾತ ತಿನಿಸು ಮ್ಯಾಗಿ ನ್ಯೂಡಲ್ಸ್ ನಲ್ಲಿ ಸೀಸ ಮತ್ತು ಗ್ಲುಟಮೇಟ್ (ಎಂಎಸ್ ಜಿ) ಅಂಶ ಹೆಚ್ಚಿದೆ ಎಂಬ ಆರೋಪದಡಿಯಲ್ಲಿ ದೇಶದ ವಿವಿಧ ರಾಜ್ಯ ಸರ್ಕಾರಗಳು ಅದಕ್ಕೆ ನಿಷೇಧ ಹೇರಿದ್ದವು. ಅಲ್ಲದೆ ಮ್ಯಾಗಿ ನ್ಯೂಡಲ್ಸ್ ನ 16 ಸ್ಯಾಂಪಲ್ಸ್ ಅನ್ನು ಪರೀಕ್ಷೆಗೊಳಪಡಿಸಬೇಕು ಎಂದು ಎನ್ ಸಿ ಡಿಆರ್ ಸಿ ಆದೇಶ ಹೊರಡಿಸಿತ್ತು.

ಇದನ್ನು ನೆಸ್ಲೆ ಇಂಡಿಯಾ ಸಂಸ್ಥೆ ಪ್ರಶ್ನಿಸಿ ಕಾನೂನು ಸಮರಕ್ಕಿಳಿದಿತ್ತು. ಬಳಿಕ ಮ್ಯಾಗಿ ನ್ಯೂಡಲ್ಸ್ ಮೇಲಿನ ನಿಷೇಧ ತೆರವುಗೊಳಿಸಬೇಕೆಂದು ನೆಸ್ಲೆ ಕಂಪನಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು.

ವಿಚಾರಣೆ ನಂತರ ಕೋರ್ಟ್  ಮ್ಯಾಗಿ ಮೇಲಿನ ನಿಷೇಧವನ್ನು ತೆರವುಗೊಳಿಸಿ ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆಯಾಗುವ ಮ್ಯಾಗಿ ನ್ಯೂಡಲ್ಸ್ ಅನ್ನು ಪರೀಕ್ಷೆಗೊಳಪಡಿಸಬೇಕು ಎಂದು  ನೆಸ್ಲೆ ಇಂಡಿಯಾಕ್ಕೆ ಈ ಹಿಂದೆ ಬಾಂಬೆ ಹೈಕೋರ್ಟ್ ಆದೇಶ ನೀಡಿತ್ತು.

ಬಾಂಬೆ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದ ಸುಪ್ರೀಂ ಕೋರ್ಟ್ ಮೈಸೂರಿನಲ್ಲಿರುವ  ಲ್ಯಾಬೋರೇಟರಿಯಲ್ಲಿ ಮರುಪರೀಕ್ಷೆ ನಡೆಸುವಂತೆ ಸೂಚನೆ ನೀಡಿತ್ತು. ನಂತರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ವಿಚಾರಣೆ ನಡೆಸಿದ್ದ ಸುಪ್ರೀಕೋರ್ಟ್ 8 ವಾರಗಳೊಳಗಾಗಿ ಮ್ಯಾಗಿಯ ಹೊಸ ಮಾದರಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT