ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ 
ದೇಶ

ವಾಕ್ ಸ್ವಾತಂತ್ರ್ಯ ಬಾಬಾ ರಾಮ್ ದೇವ್ ಅವರಿಗೆ ಅನ್ವಯವಾಗುವುದಿಲ್ಲವೇ?: ಅಮಿತ್ ಷಾ

ವಾಕ್ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರಿಂದ ನಾನು ಕೇಳಲು ಬಯಸುವುದೇನೆಂದರೆ ವಾಕ್ ಸ್ವಾತಂತ್ರ್ಯ ಬಾಬಾ ರಾಮ್ ದೇವ್ ಗೆ...

ನವದೆಹಲಿ: ಭಾರತ್ ಮಾತಾ ಕಿ ಜೈ ಘೋಷಣೆ ಕುರಿತಂತೆ ಕೇಳಿಬರುತ್ತಿರುವ ವಾದ-ವಿವಾದಗಳು ಇನ್ನೂ ನಿಲ್ಲುವ ಸ್ಥಿತಿ ಕಾಣುತ್ತಿಲ್ಲ.ಮೊನ್ನೆ ಭಾನುವಾರ ಮಾತನಾಡಿದ್ದ ಯೋಗ ಗುರು ರಾಮದೇವ್, ತಾವು ಈ ನೆಲದ ಕಾನೂನನ್ನು ಮತ್ತು ಸಂವಿಧಾನವನ್ನು ಗೌರವಿಸುತ್ತೇನೆ. ಆದರೆ, 'ಭಾರತ್ ಮಾತಾ ಕಿ ಜೈ' ಘೋಷಣೆ ಮಾಡಲು ನಿರಾಕರಿಸಿದ ಜನರ ಶಿರಚ್ಛೇದ ಮಾಡಬೇಕು ಎಂದು ಹೇಳಿದ್ದರು.

ರಾಮ್ ದೇವ್ ಹೇಳಿಕೆಗೆ ಕಾಂಗ್ರೆಸ್, ಆಪ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ರಾಮ್ ದೇವ್ ಮಾತಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬೆಂಬಲ ಸೂಚಿಸಿದ್ದಾರೆ.
ಬಾಬಾ ರಾಮ್ ದೇವ್ ಅವರು ಬಿಜೆಪಿ ಸದಸ್ಯರಲ್ಲ. ಆದರೆ ವಾಕ್ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರಲ್ಲಿ ನಾನು ಕೇಳ ಬಯಸುವುದೇನೆಂದರೆ ವಾಕ್ ಸ್ವಾತಂತ್ರ್ಯ ಬಾಬಾ ರಾಮ್ ದೇವ್ ಗೆ ಅನ್ವಯವಾಗುವುದಿಲ್ಲವೇ? ಎಂದು ಅಮಿತ್ ಷಾ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಕೇಳಿದ್ದಾರೆ ಎಂದು ಹಿಂದೂ ಪತ್ರಿಕೆ ವರದಿ ಮಾಡಿದೆ.

ರಾಮ್ ದೇವ್ ಈ ಹಿಂದೆ ಸದ್ಭಾವನಾ ರ್ಯಾಲಿಯೊಂದರಲ್ಲಿ ಮಾತನಾಡಿ, ಟೋಪಿ ಧರಿಸುವವರು ಯಾರಾದರೊಬ್ಬರು ಎದ್ದು ನಿಂತು ಯಾರು ನನ್ನನ್ನು ಕೊಲ್ಲಲು ಬಂದರೂ ಕೂಡ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ ಎಂದರೆ ನಾನು ಅವರ ಶಿರಚ್ಛೇದ ಮಾಡಲು ಬಯಸುತ್ತೇನೆ. ಆದರೆ ನಮ್ಮ ದೇಶದ ಕಾನೂನಿನಲ್ಲಿ ಆ ಅವಕಾಶವಿಲ್ಲ. ನಾನು ಈ ನೆಲದ ಕಾನೂನನ್ನು ಗೌರವಿಸುತ್ತೇನೆ ಎಂದು ಹೇಳಿದ್ದರು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT