ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಜನರ ಕನಸುಗಳನ್ನು ಈಡೇರಿಸುವುದು ನಮ್ಮ ಗುರಿ: ಪ್ರಧಾನಿ ಮೋದಿ

ಇಂದು ಇಡೀ ದೇಶದ ಜನರು ಭಾರತೀಯ ಜನತಾ ಪಕ್ಷದ ಮೇಲೆ ಭರವಸೆ, ನಂಬಿಕೆಯನ್ನಿಟ್ಟಿದ್ದಾರೆ. ದೇಶದ ಜನರ ಕನಸುಗಳನ್ನು ಮತ್ತು...

ನವದೆಹಲಿ: ಇಂದು ಇಡೀ ದೇಶದ ಜನರು ಭಾರತೀಯ ಜನತಾ ಪಕ್ಷದ ಮೇಲೆ ಭರವಸೆ, ನಂಬಿಕೆಯನ್ನಿಟ್ಟಿದ್ದಾರೆ. ದೇಶದ ಜನರ ಕನಸುಗಳನ್ನು ಮತ್ತು ಆಶೋತ್ತರಗಳನ್ನು ಈಡೇರಿಸುವುದು ನಮ್ಮ ಗುರಿಯಾಗಿದೆ. ನಮಗೆ ಜನರು ನೀಡಿದ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಳ್ಳಬೇಕಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಬಿಜೆಪಿಯ ಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತವಿರುವ ದೇಶದ ಹಲವು ರಾಜ್ಯಗಳಲ್ಲಿ ಅತ್ಯುತ್ಸಾಹ ಹಾಗೂ ಪರಿಶ್ರಮದಿಂದ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳ ಬಗ್ಗೆ ನಮಗೆ ಹೆಮ್ಮೆ ಇದೆ. ಎಲ್ಲೆಲ್ಲ ಬಿಜೆಪಿ ಸರಕಾರ ರಚಿಸಿದೆಯೋ ಅಲ್ಲೆಲ್ಲ ಬಿಜೆಪಿ ಸರಕಾರ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ಜನಸೇವೆ ನಡೆಸುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಸ್ಥಾಪನಾ ದಿನಾಚರಣೆ ಪ್ರಯಕ್ತವಾಗಿ ಇಂದು ಬಿಜೆಪಿಯ ರಾಜ್ಯ ಘಟಕಗಳು ಸಭೆ ಸಮಾರಂಗಳನ್ನು ನಡೆಸಲಿವೆ. 1980ರಲ್ಲಿ ಈ ದಿನದಂದು ಬಿಜೆಪಿಯು ಪ್ರತ್ಯೇಕ ಪಕ್ಷವಾಗಿ ಅಸ್ತಿತ್ವಕ್ಕೆ ಬಂದು ಇಂದಿಗೆ 36 ವರ್ಷ ತುಂಬಿದೆ. 

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ಅಮಿತ್ ಶಾ, ರಾಷ್ಟ್ರೀಯತೆ ಪಕ್ಷದ ಅಸ್ಥಿತ್ವವಾಗಿದ್ದು, ನಮ್ಮ ಮೂರು ತಲೆಮಾರಿನ ನಾಯಕರು ಅದನ್ನು ಕಾಪಾಡಿಕೊಂಡು ಬಂದಿದ್ದಾರೆ. ಹೊಸ ತಲೆಮಾರಿನ ನಾಯಕರು ಇದನ್ನು ಕಾಪಾಡಿ ಮುಂದಿನ ತಲೆಮಾರಿಗೆ ಮುನ್ನಡೆಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

11 ಜನರಿಂದ ಆರಂಭವಾದ ಪಕ್ಷ ಇಂದು 11 ಕೋಟಿ ಸದಸ್ಯರನ್ನು ಹೊಂದಿದೆ. ಪಕ್ಷದ ಸಾವಿರಾರು ಕಾರ್ಯಕರ್ತರ ತ್ಯಾಗದಿಂದ ಇದು ಸಾಧ್ಯವಾಯಿತು ಎಂದರು. ಭಾರತ್ ಮಾತಾ ಕಿ ಜೈ ಎಂದು ಘೋಷ ವಾಕ್ಯದೊಂದಿಗೆ ಭಾಷಣ ಆರಂಭಿಸಿದ ಶಾ ಆ ವಾಕ್ಯದೊಂದಿಗೆ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT