ಸಾಂದರ್ಭಿಕ ಚಿತ್ರ 
ದೇಶ

ಕುಪ್ವಾರದಲ್ಲಿ ಯೋಧರು, ಉಗ್ರರ ನಡುವೆ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರ ದ ಪುಲ್ವಾಮಾ, ಕುಪ್ವಾರದಲ್ಲಿ ಉಗ್ರರು ನುಸುಳಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಯೋಧರು ಬುಧವಾರ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ದ ಪುಲ್ವಾಮಾ, ಕುಪ್ವಾರದಲ್ಲಿ ಉಗ್ರರು ನುಸುಳಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಯೋಧರು ಬುಧವಾರ ಕಾರ್ಯಾಚರಣೆಗಿಳಿದಿದ್ದಾರೆ.

ಯೋಧರು ಕಾರ್ಯಾಚರಣೆ ನಡೆಸುತ್ತಿದ್ದಂತೆ ಅಡಗಿ ಕುಳಿತಿರುವ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದು, ಉಗ್ರರ ದಾಳಿಗೆ ಭಾರತೀಯ ಯೋಧರು ದಿಟ್ಟ ಉತ್ತರ ನೀಡುತ್ತಿದ್ದಾರೆ. ಈಗಾಗಲೇ ಮತ್ತಷ್ಟು ಯೋಧರು ಸ್ಥಳಕ್ಕಾಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ವರೆಗೂ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶೇಕ್ಪುರದ ಲಾಲ್ಪೊರಾ ಪ್ರದೇಶದಲ್ಲಿ ಉಗ್ರರಿರುವ ಖಚಿತ ಮಾಹಿತಿ ಮೇರೆಗೆ ಯೋಧರು ಕಳೆದ ರಾತ್ರಿಯಿಂದ ಕಾರ್ಯಾಚರಣೆಗಿಳಿದಿದ್ದರು. ಇದರಂತೆ ಇಂದು ಬೆಳಿಗ್ಗೆ ಓರ್ವ ಉಗ್ರನ್ನು ಸದೆ ಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ, ಉಗ್ರ ಬಳಿಸಿದ್ದ ಶಸ್ತ್ರಾಸ್ತ್ರಗಳನ್ನು ಯೋಧರು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ ಸಾವನ್ನಪ್ಪಿರುವ ಉಗ್ರ ಹಿಜ್ಬುಲ್ ಮುಜಾಹಿದ್ದೀನ್'ಗೆ ಸೇರಿದವನಾಗಿದ್ದಾನೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

ಹಿಜ್ಬೊಲ್ಲಾ ಉಗ್ರ ಸಂಘಟನೆ ಮೇಲೇಳದಂತೆ ಇಸ್ರೇಲ್ ಭೀಕರ ದಾಳಿ: 80ಕ್ಕೂ ಹೆಚ್ಚು ಸ್ಥಳಗಳು ಧ್ವಂಸ

ಇದ್ದಕ್ಕಿದ್ದಂತೆ Beep ಶಬ್ದ: 'ರಂಗಸ್ಥಳಂ' ನಟನಿಂದ ಅನುಚಿತ ವರ್ತನೆ? ಕೊನೆಗೂ ನಟಿ Sreeleela ಸ್ಪಷ್ಟನೆ

ಪಶ್ಚಿಮ ಬಂಗಾಳ ಚುನಾವಣೆ: 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ದೀದಿ; ಭುಗಿಲೆದ್ದ ಅಸಮಾಧಾನ

SCROLL FOR NEXT