ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬರ್ಪೇಟದಲ್ಲಿ ಆಯೋಜಿಸಲಾಗಿರುವ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಿರುವ ಸೋನಿಯಾ ಗಾಂಧಿ 
ದೇಶ

ಅಸ್ಸಾಂನಲ್ಲಿ ಸರ್ವಾಧಿಕಾರ ತರಲು ಬಯಸುತ್ತಿದೆ ಬಿಜೆಪಿ: ಸೋನಿಯಾ ಗಾಂಧಿ

ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಅಸ್ಸಾಂನಲ್ಲಿ ಸರ್ವಾಧಿಕಾರ ತರಲು ಬಯಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಗುರುವಾರ ಆರೋಪಿಸಿದ್ದಾರೆ...

ಬರ್ಪೇಟ: ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಅಸ್ಸಾಂನಲ್ಲಿ ಸರ್ವಾಧಿಕಾರ ತರಲು ಬಯಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಗುರುವಾರ ಆರೋಪಿಸಿದ್ದಾರೆ.

ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬರ್ಪೇಟ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಅಸ್ಸಾಂ ಜನತೆಯ ಎದುರಿಸುತ್ತಿರುವ ದುರಾವಸ್ಥೆಯನ್ನು ಸರಿಪಡಿಸುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರ ಇದೀಗ ಅಸ್ಸಾಂನಲ್ಲಿ ಸರ್ವಾಧಿಕಾರ ರೂಪಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಮೋದಿ ಹಾಗೂ ಅವರ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಅನೇಕ ಭರವಸೆಗಳನ್ನು ನೀಡುತ್ತಾರೆ. ಅವರ 2 ವರ್ಷದ ಸಾಧನೆಗಳನ್ನು ಹೈಲೈಟ್ ಮಾಡುತ್ತಾರೆ, ಆದರೆ ಜನರ ದುರಾವಸ್ಥೆಯನ್ನು ಸರಿಪಡಿಸುವಲ್ಲಿ ಮಾತ್ರ ವಿಫಲರಾಗಿದ್ದಾರೆ.

ಎಲ್ಲಾ ಸಮುದಾಯದ ಜನರನ್ನು ತಾರತಮ್ಯವಿಲ್ಲದೆ ನೋಡುತ್ತಿರುವ ಒಂದೇ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ. ಮೋದಿಯವರು ವಿದೇಶಕ್ಕೆ ಭೇಟಿ ನೀಡಿದಾಕ ಅಭಿವೃದ್ಧಿ ಹಾಗೂ ಶಾಂತಿ ಬಗ್ಗೆ ಮಾತನಾಡುತ್ತಾರೆ. ಆದರೆ, ತಾಯಿನಾಡಿನಲ್ಲಿ ಅವರ ಸಹೋದ್ಯೋಗಿಗಳು ದ್ವೇಷದ ಹೇಳಿಕೆಗನ್ನು ನೀಡುತ್ತಿರುತ್ತಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ದೊಡ್ಡ ಉದ್ಯಮಗಳ ಪರವಾಗಿ ನಿಂತಿರುವ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಮೋದಿ ಸರ್ಕಾರ ಸಣ್ಣ ಉದ್ಯಮಿಗಳಿಗೆ ಏನು ಮಾಡಿದೆ? ಸಣ್ಣ ಉದ್ಯಮಿಗಳಿಗೆ ಸಹಕಾರ ನೀಡುವ ಬದಲು ಅವರ ಮೇಲೆ ತೆರಿಗೆ ಹೇರುವ ಮೂಲಕ ಮತ್ತಷ್ಟು ಸಂಕಷ್ಟವನ್ನು ನೀಡಿದೆ ಎಂದು ಹೇಳಿದ್ದಾರೆ. \

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT