ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬರ್ಪೇಟದಲ್ಲಿ ಆಯೋಜಿಸಲಾಗಿರುವ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಿರುವ ಸೋನಿಯಾ ಗಾಂಧಿ 
ದೇಶ

ಅಸ್ಸಾಂನಲ್ಲಿ ಸರ್ವಾಧಿಕಾರ ತರಲು ಬಯಸುತ್ತಿದೆ ಬಿಜೆಪಿ: ಸೋನಿಯಾ ಗಾಂಧಿ

ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಅಸ್ಸಾಂನಲ್ಲಿ ಸರ್ವಾಧಿಕಾರ ತರಲು ಬಯಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಗುರುವಾರ ಆರೋಪಿಸಿದ್ದಾರೆ...

ಬರ್ಪೇಟ: ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಅಸ್ಸಾಂನಲ್ಲಿ ಸರ್ವಾಧಿಕಾರ ತರಲು ಬಯಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಗುರುವಾರ ಆರೋಪಿಸಿದ್ದಾರೆ.

ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬರ್ಪೇಟ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಅಸ್ಸಾಂ ಜನತೆಯ ಎದುರಿಸುತ್ತಿರುವ ದುರಾವಸ್ಥೆಯನ್ನು ಸರಿಪಡಿಸುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರ ಇದೀಗ ಅಸ್ಸಾಂನಲ್ಲಿ ಸರ್ವಾಧಿಕಾರ ರೂಪಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಮೋದಿ ಹಾಗೂ ಅವರ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಅನೇಕ ಭರವಸೆಗಳನ್ನು ನೀಡುತ್ತಾರೆ. ಅವರ 2 ವರ್ಷದ ಸಾಧನೆಗಳನ್ನು ಹೈಲೈಟ್ ಮಾಡುತ್ತಾರೆ, ಆದರೆ ಜನರ ದುರಾವಸ್ಥೆಯನ್ನು ಸರಿಪಡಿಸುವಲ್ಲಿ ಮಾತ್ರ ವಿಫಲರಾಗಿದ್ದಾರೆ.

ಎಲ್ಲಾ ಸಮುದಾಯದ ಜನರನ್ನು ತಾರತಮ್ಯವಿಲ್ಲದೆ ನೋಡುತ್ತಿರುವ ಒಂದೇ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ. ಮೋದಿಯವರು ವಿದೇಶಕ್ಕೆ ಭೇಟಿ ನೀಡಿದಾಕ ಅಭಿವೃದ್ಧಿ ಹಾಗೂ ಶಾಂತಿ ಬಗ್ಗೆ ಮಾತನಾಡುತ್ತಾರೆ. ಆದರೆ, ತಾಯಿನಾಡಿನಲ್ಲಿ ಅವರ ಸಹೋದ್ಯೋಗಿಗಳು ದ್ವೇಷದ ಹೇಳಿಕೆಗನ್ನು ನೀಡುತ್ತಿರುತ್ತಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ದೊಡ್ಡ ಉದ್ಯಮಗಳ ಪರವಾಗಿ ನಿಂತಿರುವ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಮೋದಿ ಸರ್ಕಾರ ಸಣ್ಣ ಉದ್ಯಮಿಗಳಿಗೆ ಏನು ಮಾಡಿದೆ? ಸಣ್ಣ ಉದ್ಯಮಿಗಳಿಗೆ ಸಹಕಾರ ನೀಡುವ ಬದಲು ಅವರ ಮೇಲೆ ತೆರಿಗೆ ಹೇರುವ ಮೂಲಕ ಮತ್ತಷ್ಟು ಸಂಕಷ್ಟವನ್ನು ನೀಡಿದೆ ಎಂದು ಹೇಳಿದ್ದಾರೆ. \

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT