ಕನ್ಹಯ್ಯಕುಮಾರ್ 
ದೇಶ

ಕನ್ಹಯ್ಯಾ ವಿರುದ್ಧ ದೂರು ದಾಖಲಿಸಿದ ಮಾಜಿ ಯೋಧ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ ವಿರುದ್ಧ ಮಾಜಿ ಸೈನಿಕ...

ಧರ್ಮಶಾಲಾ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ ವಿರುದ್ಧ ಮಾಜಿ ಸೈನಿಕ ಕಹಾನ್ ಸಿಂಗ್ ಠಾಕುರ್ ದೂರು ದಾಖಲಿಸಿದ್ದಾರೆ. 
ಭಾರತೀಯ ಸೇನೆ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಶೂಟರ್ ನಿವೃತ್ತ ಯೋಧ ಕಹಾನ್ ಸಿಂಗ್ ಅವರು ಜಿಲ್ಲಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
ಕಂಗ್ರಾ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದಲ್ಲಿ ಐಪಿಸಿ ಸೆಕ್ಷನ್ 124-ಎ(ದೇಶದ್ರೋಹ), 499(ಮಾನನಷ್ಟ), 500(ಮಾನನಷ್ಟಕ್ಕೆ ಶಿಕ್ಷೆ), 504(ಶಾಂತಿ ಕದಡಲು ಉದ್ದೇಶಪೂರ್ವಕವಾಗಿ ಹೇಳಿಕೆ), 505, 511(ಉದ್ದೇಶಪೂರ್ವಕವಾಗಿ ಅಪರಾಧಗಳು ಮಾಡುವ ಯತ್ನ) ಅಡಿ ದೂರು ದಾಖಲಿಸಲಾಗಿದೆ. 
ಜೆಎನ್ ಯು ವಿದ್ಯಾರ್ಥಿ ಕನ್ಹಯ್ಯಾ ಕುಮಾರ್ ವಿರುದ್ಧ ದೂರು ದಾಖಲಿಸಿದ್ದೇನೆ. ತನ್ನ ಹೇಳಿಕೆಯನ್ನು ಕನ್ಹಯ್ಯಾ ಹಿಂಪಡೆಯಬೇಕು, ಇಲ್ಲದಿದ್ದರೆ, ಪ್ರಕರಣವನ್ನು ಎದುರಿಸಬೇಕಾಗುತ್ತದೆ ಎಂದು ನಿವೃತ್ತ ಯೋಧ ಕಹಾನ್ ಸಿಂಗ್ ಠಾಕುರ್ ಹೇಳಿದ್ದಾರೆ. 
ಈ ಕುರಿತು ಮಾರ್ಚ್ 27ರೊಳಗೆ ಪ್ರತಿಕ್ರಯಿಸುವಂತೆ ಸಮಯ ನೀಡಲಾಗಿತ್ತು. ಆದರೆ, ಕನ್ಹಯ್ಯಾ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕ್ಷಮೆ ಕೂಡ ಯಾಚಿಸಿಲ್ಲ ಎಂದು ಅವರು ತಿಳಿಸಿದ್ದಾರೆ. 
ದೆಹಲಿ ಮಹಿಳಾ ದಿನಾಚರಣೆ ದಿನದಂದು ಕನ್ಹಯ್ಯಾ ಕುಮಾರ್, ಸೈನಿಕರೊಂದಿಗೆ ಅತೀವ ಗೌರವಿದೆ. ಹಾಗಿದ್ದರೂ ಕಾಶ್ಮೀರದಲ್ಲಿ ಭಾರತೀಯ ಸೇನೆ ಯುವತಿಯರ ಬಲತ್ಕಾರ ನಡೆಸುತ್ತಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದರು. ಇತ್ತೀಚೆಗಷ್ಟೇ ದೇಶದ್ರೋಹ ಆರೋಪದಲ್ಲಿ ಬಂಧಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಕನ್ಹಯ್ಯಾ ಬಿಡುಗಡೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT