ಎನ್ಐಟಿ ಶ್ರೀನಗರ 
ದೇಶ

ಎನ್ಐಟಿ ಶ್ರೀನಗರ ವಿದ್ಯಾರ್ಥಿಗಳು ನಂತರ ಪರೀಕ್ಷೆ ಬರೆಯಬಹುದು: ಕೇಂದ್ರ

ಘರ್ಷಣೆಯಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಶ್ರೀನಗರದ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್​ಐಟಿ) ವಿದ್ಯಾರ್ಥಿಗಳು...

ಶ್ರೀನಗರ: ಘರ್ಷಣೆಯಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಶ್ರೀನಗರದ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್​ಐಟಿ) ವಿದ್ಯಾರ್ಥಿಗಳು ತಡವಾಗಿ ಪರೀಕ್ಷೆಗೆ ಹಾಜರಾಗಬಹುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಮಾನವ ಸಂಪನ್ಮೂಲ ಸಚಿವಾಲಯದ ತ್ರಿಸದಸ್ಯ ತಂಡ ಎನ್​ಐಟಿ ಆವರಣಕ್ಕೆ ಭೇಟಿ ನೀಡಿದ ನಂತರ ಈ ನಿರ್ಧಾರ ಹೊರಬಿದ್ದಿದೆ. ಪರಿಸ್ಥಿತಿಯ ಅವಲೋಕನಕ್ಕಾಗಿ ಸ್ಥಳಕ್ಕೆ ಭೇಟಿ ನೀಡಿದ್ದ ತಂಡ ಪ್ರಕ್ಷುಬ್ಧತೆಯನ್ನು ನಿವಾರಿಸುವ ಸಲುವಾಗಿ ಚಳವಳಿ ನಿರತ ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿತ್ತು.
ಎನ್​ಐಟಿ ಆವರಣದಲ್ಲಿ ಅಭದ್ರತೆಯ ವಾತಾವರಣ ಇದೆ ಎಂದು ಹೊರಗಿನ ವಿದ್ಯಾರ್ಥಿಗಳು ಕೇಂದ್ರ ತಂಡಕ್ಕೆ ತಿಳಿಸಿದ್ದರು. ಅಲ್ಲದೆ ತಾವು ಸದ್ಯಕ್ಕೆ ತಮ್ಮ ಮನೆಗಳಿಗೆ ವಾಪಸಾಗಬಯಸಿದ್ದು, ತಮಗೆ ತಡವಾಗಿ ಪರೀಕ್ಷೆಗೆ ಬರೆಯಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದರು.
ಕಳೆದ ವಾರ ವಿಶ್ವ ಕಪ್‌ ಸೆಮಿ ಫೈನಲ್‌ ಪಂದ್ಯದಲ್ಲಿ ಭಾರತ, ವೆಸ್ಟ್‌ ಇಂಡೀಸ್‌ ತಂಡದೆದುರು ಪರಾಭವಗೊಂಡದ್ದನ್ನು ಅನುಸರಿಸಿ ಶ್ರೀನಗರದ ಎನ್‌ಐಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಗುಂಪು ಪರಸ್ಪರ ಹೊಡೆದಾಡಿಕೊಂಡ ಕಾರಣ ತೀವ್ರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!