ಶ್ರೀನಗರ ಎನ್ ಐಟಿಯಲ್ಲಿ ಘರ್ಷಣೆ (ಸಂಗ್ರಹ ಚಿತ್ರ) 
ದೇಶ

ನಮಗೆ ಯಾರಿಂದಲೂ ರಾಷ್ಟ್ರೀಯತೆಯ ಪ್ರಮಾಣಪತ್ರ ಬೇಕಿಲ್ಲ: ಕಾಶ್ಮೀರ ಪೊಲೀಸ್ ಅಧಿಕಾರಿಗಳು

ಶ್ರೀನಗರ ಎನ್ ಐಟಿಯಲ್ಲಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಟೀಕೆಗಳಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕಾಶ್ಮೀರ ಪೊಲೀಸರು ತಮಗೆ ಯಾರಿಂದಲೂ ರಾಷ್ಟ್ರೀಯತೆಯ ಪ್ರಮಾಣಪತ್ರ ಬೇಕಿಲ್ಲ ಎಂದು ಕಿಡಿಕಾರಿದ್ದಾರೆ...

ಶ್ರೀನಗರ: ಶ್ರೀನಗರ ಎನ್ ಐಟಿಯಲ್ಲಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಟೀಕೆಗಳಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕಾಶ್ಮೀರ ಪೊಲೀಸರು ತಮಗೆ  ಯಾರಿಂದಲೂ ರಾಷ್ಟ್ರೀಯತೆಯ ಪ್ರಮಾಣಪತ್ರ ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ಶ್ರೀನಗರ ಎನ್ ಐಟಿಯಲ್ಲಿ ನಡೆದ ಘರ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲಬಾರಿಗೆ ಫೇಸ್ ಬುಕ್ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಬಾರಾಮುಲ್ಲಾ ಡಿಎಸ್ ಪಿ ಫಿರೋಜ್  ಯಹ್ಯಾ ಅವರು, ನನ್ನ ಸಾಕಷ್ಟು ಸಹೋದ್ಯೋಗಿಗಳು ನಾವು ಯಾರ ವಿರುದ್ಧ ಹೋರಾಡುತ್ತಿದ್ದೇವೆ ಎಂದು ನನ್ನನ್ನೇ ಪ್ರಶ್ನಿಸಿದ್ದಾರೆ. ನಾನು ಹೇಳುವುದು ಒಂದೇ ಕಾಶ್ಮೀರ ಪೊಲೀಸರ ತ್ಯಾಗ  ಬಲಿದಾನವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಭಯೋತ್ಪಾದನೆ ಎಂಬ ಹುಚ್ಚುತನದಿಂದ ರಾಜ್ಯವನ್ನು ರಕ್ಷಿಸಲು ಹಗಲಿರುಳು ಶ್ರಮಿಸಿದ್ದೇವೆ. ಇದಕ್ಕೆ ನಮ್ಮ ಹುತಾತ್ಮ ಪೊಲೀಸರೇ ಸಾಕ್ಷಿ.  ನಮ್ಮ ರಾಷ್ಟ್ರೀಯತೆಯನ್ನು ಪ್ರಶ್ನಿಸುವ ಮೂಲಕ ಆ ತ್ಯಾಗ ಮತ್ತು ಬಲಿದಾನಕ್ಕೆ ಅಗೌರವ ನೀಡುವುದು ಬೇಡು ಮತ್ತು ನಮ್ಮ ರಾಷ್ಟ್ರೀಯತೆಗೆ ಯಾರ ಪ್ರಮಾಣಪತ್ರವೂ ನಮಗೆ ಬೇಕಿಲ್ಲ ಎಂದು  ಖಾಕವಾಗಿ ಹೇಳಿದ್ದಾರೆ.

ಇನ್ನು ಇಂತಹದೇ ಪ್ರತಿಕ್ರಿಯೆನ್ನು ಕಾಶ್ಮೀರದ ಮತ್ತೋರ್ವ ಪೊಲೀಸ್ ಹಿರಿಯ ಅಧಿಕಾರಿಯಾದ ಮುಬಸ್ಸೀರ್ ಲತಿಫಿ ಅವರ ವ್ಯಕ್ತಪಡಿಸಿದ್ದು, ಕಾಶ್ಮೀರ ಪೊಲೀಸರ ರಾಷ್ಟ್ರೀಯತೆಗೆ ಮತ್ತು  ನಿಷ್ಪಕ್ಷಪಾತ ಕರ್ತವ್ಯಕ್ಕೆ ಯಾರ ಪ್ರಮಾಣಪತ್ರವೂ ಬೇಕಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗೆ ಶ್ರೀನಗರ ಎನ್ ಐಟಿ ಸಂಸ್ಥೆಯಲ್ಲಿ ನಡೆದ ಘರ್ಷಣೆ ವೇಳೆ ಪ್ರತಿಭಟನಾ ನಿರತ ಬಿಜೆಪಿ ನೇತೃತ್ವದ ವಿದ್ಯಾರ್ಥಿ ಮುಂಖಡರ ವಿರುದ್ಧ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಈ ವೇಳೆ  ವ್ಯಾಪಕ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿ ಸಂಘಟನೆಗಳು ಪೊಲೀಸರು ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹೊರಗಿನ ವಿದ್ಯಾರ್ಥಿಗಳ ವಿರುದ್ಧ ವಿನಾಕಾರಣ ಲಾಠಿಚಾರ್ಜ್ ಮಾಡುತ್ತಿದ್ದಾರೆ  ಎಂದು ಆರೋಪಿಸಿದ್ದರು. ಈ ವಿಚಾರ ಕಾಶ್ಮೀರದ ಮಾಧ್ಯಮಗಳು ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೀಡಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT