ರಾಜ್ ಠಾಕ್ರೆ ಮತ್ತು ಒವೈಸಿ (ಸಂಗ್ರಹ ಚಿತ್ರ) 
ದೇಶ

ಮಹಾರಾಷ್ಟ್ರಕ್ಕೆ ಬಾ ನಿನ್ನ ಕುತ್ತಿಗೆ ಮೇಲೆ ಕತ್ತಿ ಇಡುತ್ತೇನೆ: ರಾಜ್ ಠಾಕ್ರೆ

ಒವೈಸಿ ಮಹಾರಾಷ್ಟ್ರಕ್ಕೆ ಬಂದರೆ ಆತನ ಕುತ್ತಿಗೆ ಮೇಲೆ ನಾನು ಕತ್ತಿ ಇಡುತ್ತೇನೆ ಎಂದು ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ...

ಮುಂಬೈ: ಭಾರತ ಮಾತಾ ಕೀ ಜೈ ವಿವಾದ ತಾರಕಕ್ಕೇರಿದ್ದು, ವಿವಾದಾತ್ಮಕ ಹೇಳಿಕೆ ನೀಡಿದ್ದ ಒವೈಸಿ ಮಹಾರಾಷ್ಟ್ರಕ್ಕೆ ಬಂದರೆ ಆತನ ಕುತ್ತಿಗೆ ಮೇಲೆ ನಾನು ಕತ್ತಿ ಇಡುತ್ತೇನೆ  ಎಂದು ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ ಠಾಕ್ರೆ ಬಿಜೆಪಿ, ಶಿವಸೇನೆ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಶಿವಸೇನೆ ಮತ್ತು ಬಿಜೆಪಿ  ಪಕ್ಷಗಳು ಅಧಿಕಾರದ ಕಿತ್ತಾಟದಲ್ಲಿ ತೊಡಗಿದ್ದು, ರಾಜ್ಯ ಏಳ್ಗೆಯನ್ನೇ ಮರೆತುಬಿಟ್ಟಿವೆ ಎಂದು ಕಿಡಿಕಾರಿದರು. ಇದೇ ವೇಳೆ ಒವೈಸಿ ಸಹೋದರರ ವಿರುದ್ಧ ಕಿಡಿಕಾರಿದ ರಾಜ್ ಠಾಕ್ರೆ  ಒವೈಸಿ ಸಹೋದರರು ಬಿಜೆಪಿಯಿಂದ ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು. ಅಂತೆಯೇ ಭಾರತ ಮಾತಾ ಕೀ ಜೈ ವಿವಾದ ಸಂಬಂಧ ಮಾತನಾಡಿದ ರಾಜ್ ಠಾಕ್ರೆ,  ಒವೈಸಿ ಮಹಾರಾಷ್ಟ್ರಕ್ಕೆ ಬಂದರೆ ಆತನ ಕುತ್ತಿಗೆ ಮೇಲೆ ನಾನು ಕತ್ತಿ ಇಡುತ್ತೇನೆ ಎಂದು ಹೇಳಿದರು.

ಈ ಹಿಂದೆ ಇದೇ ವಿವಾದ ಸಂಬಂಧ ಹೇಳಿಕೆ ನೀಡಿದ್ದ ಎಂಐಎಂ ಸಂಸ್ಥಾಪಕ ಅಸಾದುದ್ದೀನ್ ಒವೈಸಿ, ನನ್ನ ಕುತ್ತಿಗೆ ಮೇಲೆ ಕತ್ತಿ ಇಟ್ಟರೂ ನಾನು ಭಾರತ ಮಾತಾ ಕಿ ಜೈ  ಎನ್ನಲಾರೆ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಒವೈಸಿ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT