ಮೆಹಬೂಬಾ ಮುಫ್ತಿ 
ದೇಶ

ಎನ್ಐಟಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಕೋಮು ಘಟನೆ ಎಂಬಂತೆ ಬಿಂಬಿಸಲಾಗುತ್ತಿದೆ: ಮೆಹಬೂಬಾ ಮುಫ್ತಿ

ಅನಾವಶ್ಯಕವಾಗಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ ಕಾಶ್ಮೀರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀನಗರ ಎನ್ ಐಟಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.

ಶ್ರೀನಗರ: ಅನಾವಶ್ಯಕವಾಗಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ ಕಾಶ್ಮೀರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀನಗರ ಎನ್ ಐಟಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಶನಿವಾರವೂ ಮುಂದುವರೆದಿದೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ರಾಜ್ಯ ಸರ್ಕಾರ ನಡೆಸಿದ ಮಾತುಕತೆ ಫಲಪ್ರದವಾಗದೆ ಮನವೊಲಿಕೆ ಯತ್ನ ವಿಫಲವಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಸ್ಥಳೀಯ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಮೆಹಬೂಬಾ ಮುಫ್ತಿ, ಎನ್ಐಟಿ ವಿದ್ಯಾರ್ಥಿಗಳ ಪ್ರತಿಭಟನೆ ಚರ್ಚೆಯ ವಿಷಯವೇ ಅಲ್ಲ. ಆದರೂ ಈ ಘಟನೆಯನ್ನು ಕೋಮು ಘಟನೆ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಎನ್ಐಟಿ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರೊಂದಿಗೂ ಮಾತನಾಡಿದ್ದು, ಅನಾವಶ್ಯಕವಾಗಿ ಘಟನೆಯನ್ನು ಕೋಮು ಘಟನೆ ಎಂಬಂತೆ ಬಿಂಬಿಸಲಾಗುತ್ತಿದೆ ಎಂಬ ವಿಷಯವನ್ನು ತಿಳಿಸಿರುವುದಾಗಿ ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ. ಎನ್ಐಟಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊರ ರಾಜ್ಯಗಳ ವಿದ್ಯಾರ್ಥಿಗಳು ಜಮ್ಮು-ಕಾಶ್ಮೀರದಿಂದ ಬೇರೆಡೆಗೆ ಸ್ಥಳಾಂತರಗೊಳ್ಳಲು ಇಚ್ಛಿಸುತ್ತಿದ್ದರು ಎಂದು ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT