ಡಾ.ಬಿಆರ್ ಅಂಬೇಡ್ಕರ್ (ಸಂಗ್ರಹ ಚಿತ್ರ) 
ದೇಶ

ವಿಶ್ವಸಂಸ್ಥೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವಿಶ್ವಸಂಸ್ಥೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಅಚರಿಸಲು ನಿರ್ಧರಿಸಲಾಗಿದೆ...

ವಿಶ್ವಸಂಸ್ಥೆ: ವಿಶ್ವಸಂಸ್ಥೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಅಚರಿಸಲು ನಿರ್ಧರಿಸಲಾಗಿದೆ.

ಸುಸ್ಥಿರ ಅಭಿವೃದ್ಧಿ ಸಾಧನೆಗಾಗಿ ಅಸಮಾನತೆಯ ಎದುರಿಸುವ ಗುರಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ಭಾರತದ ಸಂವಿಧಾನ ಶಿಲ್ಪಿ  ಡಾ.ಬಿಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಕಲ್ಪನಾ ಸರೋಜ್ ಫೌಂಡೇಷನ್ ನೇತೃತ್ವದಲ್ಲಿ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಇದೇ  ಏಪ್ರಿಲ್ 13 ಅಂದರೆ ಅಂಬೇಡ್ಕರ್ ಅವರ ಜನ್ಮ ದಿನಕ್ಕೂ ಒಂದು ದಿನ ಮುಂಚಿತವಾಗಿ ಅವರ ಜಯಂತಿ ಆಚರಣೆ ಮಾಡಲು ವಿಶ್ವಸಂಸ್ಥೆಯ ಸದಸ್ಯರು ನಿರ್ಧರಿಸಿದ್ದಾರೆ. ಅಲ್ಲದೇ  ಈ ವಿಶೇಷ ಸಂದರ್ಭದಲ್ಲಿ ಅಂಬೇಡ್ಕರ್ ಸಿದ್ಧಾಂತಗಳ ಕುರಿತು ವಿಶ್ವಸಂಸ್ಥೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಈ ವಿಚಾರವನ್ನು ಸ್ವತಃ ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಅವರು ಟ್ವಿಟರ್ ನಲ್ಲಿ ಹೇಳಿಕೊಂಡಿದ್ದು, ಜಯಂತಿ ಆಚರಣೆ ಭಾರತಕ್ಕೆ ಸಂದ  ಗೌರವ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT